ದಾವಣಗೆರೆ : 2020-21ನೇ ಸಾಲಿನಲ್ಲಿ ಕೋವಿಡ್-19 ಲಾಕ್ಡೌನ್ ಸಮಸ್ಯೆಯಿಂದಾಗಿ ಸಂಕಷ್ಟಕ್ಕೆ ಒಳಗಾಗಿದ್ದ ಮುಸುಕಿನಜೋಳ ಬೆಳೆದ ಜಿಲ್ಲೆಯ ರೈತರಿಗೆ ಸರ್ಕಾರವು ಆರ್ಥಿಕ ನೆರವು ಘೋಷಿಸಿದ್ದು, ಪ್ರತಿ ರೈತರಿಗೆ ರೂ. 5000/-ಗಳನ್ನು ಸಂಬಂಧಿಸಿದ ರೈತರ ಖಾತೆಗಳಿಗೆ ವರ್ಗಾಯಿಸಲಾಗಿದೆ. ಆದರೂ ಸಹ ಬೆಳೆ ಸಮೀಕ್ಷೆಯಲ್ಲಿ ಬೆಳೆ ನಮೂದಾಗಿ ಖಾತೆಗಳಿಗೆ ಹಣ ಜಮೆಯಾಗದ ರೈತರ ಅನುಕೂಲಕ್ಕಾಗಿ ಜಂಟಿ ಕೃಷಿ ನಿರ್ದೇಶಕರು, ದಾವಣಗೆರೆ ಕಚೇರಿಯಲ್ಲಿ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದ್ದು, ರೈತರು ಮೊಬೈಲ್ ಸಂಖ್ಯೆ : 8277928938 ಇದಕ್ಕೆ ಕರೆ ಮಾಡಿ ವಿವರಗಳನ್ನು ಪಡೆಯಬಹುದೆಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ.