ದಾವಣಗೆರೆ ಎಪಿಎಂಸಿಯಲ್ಲಿ ಇ-ಟೆಂಡರ್ ಮೂಲಕ ಮೆಕ್ಕೆಜೋಳ ಮಾರಾಟ ಆರಂಭ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ದಾವಣಗೆರೆ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣಕ್ಕೆ ಆವಕವಾಗುವ ಮೆಕ್ಕೆಜೋಳ ಉತ್ಪನ್ನವನ್ನು ಇ-ಟೆಂಡರ್ ಮೂಲಕ ಮಾರಾಟ ನಡೆಸಲು ತೀರ್ಮಾನಿಸಿರುವುದರಿಂದ ಜ. 17 ರಿಂದ ಪ್ರತಿದಿನ ಇ-ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಿದ್ದು, ರೈತರು, ದಲ್ಲಾಲರು, ವರ್ತಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಎಪಿಎಂಸಿ ಕಾರ್ಯದರ್ಶಿ ಮನವಿ ಮಾಡಿದ್ದಾರೆ.

ಮೆಕ್ಕೆಜೋಳ ಉತ್ಪನ್ನಕ್ಕೆ ಜ.17 ಸೋಮವಾರದಿಂದ ಪ್ರತಿದಿನ (ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ) ಬೆಳಿಗ್ಗೆ 09 ರಿಂದ ಮಧ್ಯಾಹ್ನ 12.50 ಗಂಟೆಯವರೆಗೆ ಇ-ಟೆಂಡರ್ ಪ್ರಕ್ರಿಯೆ ನಡೆಯಲಿದ್ದು, ಆಯಾ ದಿನದಂದು ಮಧ್ಯಾಹ್ನ 1 ಗಂಟೆಗೆ ಟೆಂಡರ್ ಘೋಷಣೆಯಾಗಲಿದೆ. ಇದರಿಂದಾಗಿ ರೈತರಿಗೆ ಸ್ಪರ್ಧಾತ್ಮಕ ಧಾರಣೆಗಳು ಸಿಗಲಿದ್ದು, ದಾವಣಗೆರೆ ಜಿಲ್ಲೆ ಹಾಗೂ ಇತರೆ ಜಿಲ್ಲೆಯ ರೈತರು ತಾವು ಬೆಳೆದ ಮೆಕ್ಕೆಜೋಳ ಉತ್ಪನ್ನವನ್ನು ಮಾರುಕಟ್ಟೆಗೆ ತಂದು ಇ-ಟೆಂಡರ್‍ನಲ್ಲಿ ಮಾರಾಟಮಾಡಿ ಎಲ್ಲಾ ರೈತಬಾಂಧವರು, ದಲ್ಲಾಲರು, ವರ್ತಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ದಾವಣಗೆರೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಪ್ರಕಟಣೆಯುಲ್ಲಿ ತಿಳಿಸಿದ್ದಾರೆ.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *