ದಾವಣಗೆರೆ: ದಾವಣಗೆರೆ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣಕ್ಕೆ ಆವಕವಾಗುವ ಮೆಕ್ಕೆಜೋಳ ಉತ್ಪನ್ನವನ್ನು ಇ-ಟೆಂಡರ್ ಮೂಲಕ ಮಾರಾಟ ನಡೆಸಲು ತೀರ್ಮಾನಿಸಿರುವುದರಿಂದ ಜ. 17 ರಿಂದ ಪ್ರತಿದಿನ ಇ-ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಿದ್ದು, ರೈತರು, ದಲ್ಲಾಲರು, ವರ್ತಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಎಪಿಎಂಸಿ ಕಾರ್ಯದರ್ಶಿ ಮನವಿ ಮಾಡಿದ್ದಾರೆ.
ಮೆಕ್ಕೆಜೋಳ ಉತ್ಪನ್ನಕ್ಕೆ ಜ.17 ಸೋಮವಾರದಿಂದ ಪ್ರತಿದಿನ (ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ) ಬೆಳಿಗ್ಗೆ 09 ರಿಂದ ಮಧ್ಯಾಹ್ನ 12.50 ಗಂಟೆಯವರೆಗೆ ಇ-ಟೆಂಡರ್ ಪ್ರಕ್ರಿಯೆ ನಡೆಯಲಿದ್ದು, ಆಯಾ ದಿನದಂದು ಮಧ್ಯಾಹ್ನ 1 ಗಂಟೆಗೆ ಟೆಂಡರ್ ಘೋಷಣೆಯಾಗಲಿದೆ. ಇದರಿಂದಾಗಿ ರೈತರಿಗೆ ಸ್ಪರ್ಧಾತ್ಮಕ ಧಾರಣೆಗಳು ಸಿಗಲಿದ್ದು, ದಾವಣಗೆರೆ ಜಿಲ್ಲೆ ಹಾಗೂ ಇತರೆ ಜಿಲ್ಲೆಯ ರೈತರು ತಾವು ಬೆಳೆದ ಮೆಕ್ಕೆಜೋಳ ಉತ್ಪನ್ನವನ್ನು ಮಾರುಕಟ್ಟೆಗೆ ತಂದು ಇ-ಟೆಂಡರ್ನಲ್ಲಿ ಮಾರಾಟಮಾಡಿ ಎಲ್ಲಾ ರೈತಬಾಂಧವರು, ದಲ್ಲಾಲರು, ವರ್ತಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ದಾವಣಗೆರೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಪ್ರಕಟಣೆಯುಲ್ಲಿ ತಿಳಿಸಿದ್ದಾರೆ.