Connect with us

Dvgsuddi Kannada | online news portal | Kannada news online

ವಕ್ಫ್ ಕಾಯ್ದೆ ರದ್ದಾಗುವವರೆಗೂ ದೇಶಾದ್ಯಂತ ಹೋರಾಟ: ರೈತರ, ಮಠ, ಮಂದಿರಗಳ ಒಂದಿಂಚೂ ಜಾಗ ವಕ್ಫ್ ಗೆ ಬಿಡಲ್ಲ; ಶಾಸಕ ಹರೀಶ್

BP harish MLA Harihara

ದಾವಣಗೆರೆ

ವಕ್ಫ್ ಕಾಯ್ದೆ ರದ್ದಾಗುವವರೆಗೂ ದೇಶಾದ್ಯಂತ ಹೋರಾಟ: ರೈತರ, ಮಠ, ಮಂದಿರಗಳ ಒಂದಿಂಚೂ ಜಾಗ ವಕ್ಫ್ ಗೆ ಬಿಡಲ್ಲ; ಶಾಸಕ ಹರೀಶ್

ದಾವಣಗೆರೆ: ರೈತರು, ಮಠ, ಮಂದಿರಗಳಿಗೆ ವಕ್ಫ್ ನೋಟಿಸ್ ಕೊಡುವ ಮೂಲಕ ಶಾಂತವಾಗಿದ್ದ ರಾಜ್ಯದಲ್ಲಿ ಅಶಾಂತಿ ಸೃಷ್ಟಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಯಾವುದೇ ಕಾರಣಕ್ಕೂ ಒಂದಿಂಚೂ ಜಾಗವನ್ನೂ ವಕ್ಫ್ ಬೋರ್ಡ್ ಗೆ ಬಿಟ್ಟುಕೊಡವ ಮಾತಿಲ್ಲ. ವಕ್ಫ್ ಕಾಯ್ದೆ ರದ್ದಾಗುವವರೆಗೂ ದೇಶಾದ್ಯಂತ ಹೋರಾಟ ಮಾಡುತ್ತೇವೆ ಎಂದು ಶಾಸಕ ಬಿ. ಪಿ. ಹರೀಶ್ ಹೇಳಿದರು.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ‌ ಅಧಿಕಾರಕ್ಕೆ ಬಂದ ನಂತೆ ಹಿಂದೂಗಳ ಮೇಲೆ ನಿರಂತರ ಅನ್ಯಾಯ ನಡೆಯುತ್ತಿದೆ. ಮುಂಬರುವ ದಿನಗಗಳಲ್ಲಿ ಹಿಂದೂಗಳು‌ ಎಚ್ಚರಿಕೆಯಿಂದ ಇರಬೇಕು. ವಕ್ಫ್ ವಿಚಾರದಲ್ಲಿ ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಅನ್ಯಾಯ ಎಸಗಿದ್ದಾರೆ. ವಕ್ಪ್ ಕಾಯ್ದೆ ರದ್ದು ಮಾಡಬೇಕು‌ ಈ ವಿವಾದಕ್ಕೆ ಕಾರಣರಾದ ವಕ್ಫ್ ಸಚಿವ ಜಮೀರ್ ಅಹಮದ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ದಾವಣಗೆರೆ ಪಿಜೆ‌ ಬಡಾವಣೆಯ‌ ನಾಲ್ಕುವರೆ ಎಕರೆ ವಕ್ಫ್ ಆಸ್ತಿ ಎಂದು ದಾಖಲೆಯಲ್ಲಿ ಬಂದಿದೆ. ಇದು‌ ರಾಜ್ಯ ಅಷ್ಟೇ ಅಲ್ಲ ದೇಶದ ಸಮಸ್ಯೆ. ಈಗಾಗಲೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ನಾಯಕರು ಧರಣಿ ಸತ್ಯಾಗ್ರಹ ಮಾಡಿದ್ದಾರೆ. ಮುಂಬರುವ ದಿನಗಳಲ್ಲಿ ಮಾಜಿ ಸಂಸದ ಡಾ. ಜಿ. ಎಂ. ಸಿದ್ದೇಶ್ವರ ನೇತೃತ್ವದಲ್ಲಿ ದಾವಣಗೆರೆಯಲ್ಲಿಯೂ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top