ದಾವಣಗೆರೆ: ಮಾಯಕೊಂಡದಲ್ಲಿ ಈ ಬಾರಿ ಕಾಂಗ್ರೆಸ್ ಗೆದ್ದೇ ಗೆಲ್ಲಲಿದೆ ಎಂದು ಒಂದು ಎಕರೆ ಅಡಿಕೆ ತೋಟ ಪಣಕ್ಕೆ ಇಟ್ಟ ಭೂಪ..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ; ಜಿಲ್ಲೆಯ ಮಾಯಕೊಂಡ ವಿಧಾನಸಭೆ ಮೀಸಲು (ಎಸ್ಸಿ) ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯ ಸಾಧಿಸಲಿದೆ ಎಂದು ಕಾಂಗ್ರೆಸ್ ಪಕ್ಷದ ಅಭಿಮಾನಿಯೊಬ್ಬ ತನ್ನ ಒಂದು ಎಕರೆ ಅಡಿಕೆ ತೋಟವನ್ನು ಪಣಕ್ಕೆ ಇಟ್ಟಿದ್ದಾನೆ.

ಚನ್ನಗಿರಿ ತಾಲ್ಲೂಕಿನ ಕವಳಿ ತಾಂಡದ ನಾಗರಾಜ್ ನಾಯ್ಕ್ ಈ ಸವಾಲು ಹಾಕಿದ ವ್ಯಕ್ತಿಯಾಗಿದ್ದಾರೆ. ಮಾಯಕೊಂಡ ವಿಧಾನಸಭಾ ಕ್ಷೇತ್ರವು ದಾವಣಗೆರೆ, ಮಾಯಕೊಂಡ, ಚನ್ನಗಿರಿ ತಾಲ್ಲೂಕಿನ ಸ್ವಲ್ಪ ಭಾಗ ಒಳಗೊಂಡಿದೆ. ಈ ಕ್ಷೇತ್ರವು ಮೀಸಲು ಕ್ಷೇತ್ರವಾಗುದ್ದು, ಕಾಂಗ್ರೆಸ್ ನಿಂದ ಬಸವಂತಪ್ಪ, ಬಿಜೆಪಿಯಿಂದ ಬಸವರಾಜ ನಾಯ್ಕ್ , ಜೆಡಿಎಸ್ ನಿಂದ ಆನಂದಪ್ಪ ಕಣದಲ್ಲಿದ್ದಾರೆ. ಇವರ ಜೊತೆಗೆ ಪಕ್ಷೇತರ ಅಭ್ಯರ್ಥಿಗಳಾಗಿ ಅನೇಕರು ಕಣದಲ್ಲಿದ್ದಾರೆ. ಕಳೆದ ಬಾರಿ ಬಿಜೆಪಿ ಗೆಲುವು ಸಾಧಿಸಿತ್ತು. ಈ ಬಾರಿ ಕಾಂಗ್ರೆಸ್ ಗೆದ್ದೆ ಗೆಲ್ಲಲಿದೆ ಎಂದು ನಾಗರಾಜ ನಾಯ್ಕ್ ಒಂದು ಎಕರೆ ಅಡಿಕೆ ತೋಟ ಪಣಕ್ಕೆ ಇಟ್ಟಿದ್ದಾರೆ.

ನನಗೆ ವಿಶ್ವಾಸವಿದೆ, ಕಾಂಗ್ರೆಸ್ ನೂರಕ್ಕೆ ನೂರಷ್ಟು ಗೆಲುವು ಸಾಧಿಸಲಿದೆ. ಕಾಂಗ್ರೆಸ್ ಗೆಲ್ಲುವುದಿಲ್ಲ ಎನ್ನುವವರು ಯಾರಾದರೂ ಎದುರಾಳಿಗಳು ಸವಾಲು ಸ್ವೀಕರಿಸಿ ಬನ್ನಿ, ನನ್ನ ಒಂದು ಅಡಿಕೆ ತೋಟ ಪಣಕ್ಕೆ ಇಟ್ಟಿದ್ದಾನೆ. ಈ ಬಗ್ಗೆ ಅಗ್ರಿಮೆಂಟ್ ಮಾಡೋಣ ಎಂದಿದ್ದಾರೆ.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *