ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಚುನಾವಣೆಯಲ್ಲಿ ಸಚಿವ ಆರ್.ಶಂಕರ್ ಮತ್ತು ವಿಧಾನಪರಿಷತ್ ಸದಸ್ಯ ಚಿದಾನಂದಗೌಡ ಮತದಾನ ಪ್ರಶ್ನಿಸಿ ಕಾಂಗ್ರೆಸ್ನ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಫೆ. 24 ರಂದು ನಡೆಯಲಿರುವ ಚುನಾವಣೆಯಲ್ಲಿ ಮತದಾನಕ್ಕೆ ಅವಕಾಶ ಕಲ್ಪಿಸಿದೆ.
ಈ ಮೂಲಕ ಮತದಾತರ ಪಟ್ಟಿಯಲ್ಲಿ ಎಂ.ಎಲ್.ಸಿ ಗಳ ಹೆಸರನ್ನು ಅಕ್ರಮವಾಗಿ ಸೇರ್ಪಡೆಗೊಳಿಸಲಾಗಿದೆ ಎಂಬ ಕಾಂಗ್ರಸ್ ನ ಆರೋಪ ನಿರಾಧಾರ ಎಂದು ಸಾಮಿತ್ತಾಗಿದೆ. ಸಚಿವರು, ವಿಧಾನ ಪರಿಷತ್ ಸದಸ್ಯರು ಮುಂಬರುವ ಮೇಯರ್ ಉಪ ಮೇಯರ್ ಚುನಾವಣೆಗೆ ಮತ ಹಾಕಲು ಅವಕಾಶ ನೀಡಿರುವುದು ಸಂವಿಧಾನಿಕವಾಗಿದೆ ಎಂಬುದನ್ನು ನ್ಯಾಯಾಲಯ ಎತ್ತಿ ಹಿಡಿದಿದೆ. ಈ ಬಾರಿಯು ಸಹ ಪಾಲಿಕೆಯಲ್ಲಿ ಅಧಿಕಾರವನ್ನು ಬಿಜೆಪಿ ಅಲಂಕರಿಸಲಿದೆ ಎಂಬ ವಿಶ್ವಾಸ ಧೃಡವಾಗಿದೆ ಎಂದು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಪಸನ್ನ ಕುಮಾರ್ ತಿಳಿಸಿದ್ದಾರೆ.



