Connect with us

Dvgsuddi Kannada | online news portal | Kannada news online

ದಾವಣಗೆರೆ; ನೂತನ ಮೇಯರ್ ಆಗಿ ವಿನಾಯಕ ಪೈಲ್ವಾನ್ ಅವಿರೋಧ ಆಯ್ಕೆ; ಯಶೋಧಾ ಹೆಗ್ಗೆಪ್ಪ ಉಪಮೇಯರ್

ದಾವಣಗೆರೆ

ದಾವಣಗೆರೆ; ನೂತನ ಮೇಯರ್ ಆಗಿ ವಿನಾಯಕ ಪೈಲ್ವಾನ್ ಅವಿರೋಧ ಆಯ್ಕೆ; ಯಶೋಧಾ ಹೆಗ್ಗೆಪ್ಪ ಉಪಮೇಯರ್

ದಾವಣಗೆರೆ: ತೀವ್ರ ಕುತೂಹಲ ಮೂಡಿಸಿದ್ದ ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಮೇಯರ್ ಸ್ಫರ್ಧೆಯಿಂದ ಹಿಂದೆ ಸರಿದ ಹಿನ್ನೆಲೆ ಪಾಲಿಕೆಯ ಬಿಜೆಪಿ ಬೆಂಬಲಿತ ಕಾಂಗ್ರೆಸ್ ಸದಸ್ಯ 7ನೇ ವಾರ್ಡ್‌ನ ಸದಸ್ಯ ವಿನಾಯಕ ಪೈಲ್ವಾನ್ ಮೇಯರ್ ಹಾಗೂ ಬಿಜೆಪಿಯ 27ನೇ ವಾರ್ಡ್‌ನ ಪಾಲಿಕೆ ಸದಸ್ಯೆ ಯಶೋಧಾ ಹೆಗ್ಗೆಪ್ಪ ಉಪ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಮೇಯರ್ ಆಗಿ ವಿನಾಯಕ ಪೈಲ್ವಾನ್ ಅವಿರೋಧವಾಗಿ ಆಯ್ಕೆ ಯಾದರೆ, ಉಪ ಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಯಶೋಧಾ ಹೆಗ್ಗೆಪ್ಪ ಐದು ಮತಗಳ ಅಂತರದಲ್ಲಿ ಜಯಗಳಿಸಿದರು.ಮೇಯರ್ ಸ್ಥಾನ ಎಸ್‌ಟಿಗೆ ಮೀಸಲಾಗಿದ್ದು, ಮೇಯರ್ ಸ್ಥಾನಕ್ಕೆ ಏರಲು ಅಗತ್ಯವಾದ ಬಹುಮತ ಹೊಂದಿದ್ದರೂ ಬಿಜೆಪಿಯಲ್ಲಿ ಪ. ಪಂಗಡದವರು ಇರಲಿಲ್ಲ. ಹಾಗಾಗಿ ಕಾಂಗ್ರೆಸ್‌ನ ವಿನಾಯಕ ಪೈಲ್ವಾನ್ ಅವರನ್ನು ಸೆಳೆದ ಬಿಜೆಪಿಯವರು ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಗದ್ದಲ್ಲ, ತಳ್ಳಾಟ, ನೂಕಾಟ ನಡುವೆ ಬಿಜೆಪಿ ಬೆಂಬಲಿತ ವಿನಾಯಕ ಪೈಲ್ವಾನ್ ನಾಮಪತ್ರ ಸಲ್ಲಿಸಿ ಹೊರ ಬಂದರು.

ಮೇಯರ್ ಸ್ಥಾನಕ್ಕೆ ಕಾಂಗ್ರೆಸ್‌ನ ಸವಿತಾ ಹುಲ್ಮನೆ ಗಣೇಶ್ ನಾಮಪತ್ರ ಸಲ್ಲಿಸಿದ ನಂತರದ ಕೆಲ ಹೊತ್ತಿನಲ್ಲಿ ವಿನಾಯಕ ಪೈಲ್ವಾನ್ ಮಾಜಿ ಮೇಯರ್ ಎಸ್.ಟಿ. ವೀರೇಶ್,ಸದಸ್ಯರಾದ ಕೆ. ಪ್ರಸನ್ನ ಕುಮಾರ್, ಸೋಗಿ ಶಾಂತ ಕುಮಾರ್ ಅವರೊಟ್ಟಿಗೆ ನಾಮಪತ್ರ ಸಲ್ಲಿಸಲು ಆಗಮಿಸುತ್ತಿದ್ದಂತೆಯೇ ವಿರೋಧ ಪಕ್ಷದ ನಾಯಕ ಜಿ.ಎಸ್. ಮಂಜುನಾಥ್, ಪಾಮೇನಹಳ್ಳಿ ನಾಗರಾಜ್, ಕೆ. ಚಮನ್‌ಸಾಬ್, ಉದಯ್‌ಕುಮಾರ್ ಇತರರು, ಬಿಜೆಪಿ ಯವರ ಜೊತೆಗೆ ಹೋಗಬೇಡ, ನಮ್ಮ ಜೊತೆಗೆ ಬಾ ಎಂದು ಒತ್ತಾಯಿಸಿದರು. ನಾನು ಪಕ್ಷ ಬಿಟ್ಟಿಲ್ಲ ಎನ್ನುತ್ತಲೇ ನಾಮಪತ್ರ ಸಲ್ಲಿಸಿದರು. ಮೇಯರ್ ಚುನಾವಣೆ ಸಮಯದಲ್ಲಿ ವಿನಾಯಕ ಪೈಲ್ವಾನ್ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಪಾದಕ್ಕೆ ನಮಸ್ಕರಿಸಿ, ಮೇಯರ್ ಆಗಲು ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದರು. ಶಾಮನೂರು ಶಿವಶಂಕರಪ್ಪ ಅವರ ಸೂಚನೆಯಂತೆ ಸವಿತಾ ಹುಲ್ಮನೆ ಗಣೇಶ್ ನಾಮಪತ್ರ ಹಿಂಪಡೆದ ಕಾರಣಕ್ಕೆ ವಿನಾಯಕ ಪೈಲ್ವಾನ್ ನೂತನ ಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top