ದಾವಣಗೆರೆ ಮೇಯರ್ ಚುನಾವಣೆ; ಅಚ್ಚರಿಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಮೇಯರ್ ಆಕಾಂಕ್ಷಿ ದೇವರಮನಿ ಶಿವಕುಮಾರ್ ಬಿಜೆಪಿಗೆ ಸೇರ್ಪಡೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಮಹಾನಗರ ಪಾಲಿಕೆಯ ಮೇಯರ್‌ ಚುನಾವಣೆಗೆ ಹಿನ್ನೆಲೆ ನಿನ್ನೆ ತಡ ರಾತ್ರಿ ಅಚ್ಚರಿಯ ರಾಜಕೀಯ ಬೆಳವಣಿಗೆ ನಡೆದಿದೆ. ಕಾಂಗ್ರೆಸ್‌ ಪಕ್ಷದ ಮೇಯರ್‌ ಆಕಾಂಕ್ಷಿ ಹಾಗೂ ಶಾಮನೂರು ಶಿವಶಂರಪ್ಪ ಅವರ ಅಪ್ತ ದೇವರಮನಿ ಶಿವಕುಮಾರ್‌ ಪಾಲಿಕೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಿದ್ದಾರೆ. ಈ ಮೂಲಕ ದಾವಣಗೆರೆ ರಾಜಕಾರಣದಲ್ಲಿ ಸಂಚಲನ ಉಂಟಾಗಿದೆ.

IMG 20210224 WA0005

ಈ ಬಾರಿಯ ಮೇಯರ್ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ದೇವರಮನಿ ಶಿವಕುಮಾರ್‌ ಮತ್ತು ಜೆ.ಎನ್‌. ಶ್ರೀನಿವಾಸ್‌ ಪ್ರಬಲ ಆಕಾಂಕ್ಷಿಯಾಇದ್ದರು. ಶ್ರೀನಿವಾಸ್‌ ಮನವೊಲಿಸಿ ಶಿವಕುಮಾರ್‌ ಅವರನ್ನುವ ಅಂತಿಮಗೊಳಿಸಿದ್ದರು. ಆದರೆ ಗೆಲುವಿಗೆ ಬೇಕಾದ ಸ್ಥಾನ ಹೊಂದಿರಲಿಲ್ಲ. ಹೀಗಾಗಿ ಈ ವಿಚಾರದಲ್ಲಿ ಪಕ್ಷದ ನಾಯಕರ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ.

ಸಂಸದರ ಜಿಎಂಐಟಿ ಅತಿಥಿ ಗೃಹಕ್ಕೆ ತೆರಳಿದ ಶಿವಕುಮಾರ್‌ ಸಂಸದ ಜಿ.ಎಂ. ಸಿದ್ದೇಶ್ವರ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿರುವುದನ್ನು ಘೋಷಿಸಿದ್ದಾರೆ.ಪಾಲಿಕೆ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆಯನ್ನು ಮೇಯರ್‌ ಅಜಯ್ ಕುಮಾರ್ ಗೆ ಸಲ್ಲಿಸಿದರು.

IMG 20210224 WA0003

ಈ ಸಂದರ್ಭದಲ್ಲಿ ಸಕ ಎಸ್‌.ಎ. ರವೀಂದ್ರನಾಥ್‌, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ್‌ ಹನಗವಾಡಿ, ಮಾಜಿ ಅಧ್ಯಕ್ಷ ಯಶವಂತರಾವ್‌ ಜಾಧವ್‌, ಜಯಪ್ರಕಾಶ್‌ ಕೊಂಡಜ್ಜಿ ಅವರೂ ಇದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *