ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಮತದಾರರ ಪಟ್ಟಿಯಲ್ಲಿ ಸಚಿವ R.ಶಂಕರ್ ಹೆಸರು ಸೇರ್ಪಡೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರು ಹೈಕೋರ್ಟ್ ಮೊರೆಹೋಗಿದ್ದಾರೆ.
ಫೆ. 24ರಂದು ಪಾಲಿಕೆಯ ಮೇಯರ್ ಚುನಾವಣೆಯಿರುವ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಸಚಿವರ ಹೆಸರು ದಾವಣಗೆರೆ ಮತ್ತು ರಾಣೆಬೆನ್ನೂರಲ್ಲಿ ಸೇರ್ಪಡೆ ಮಾಡಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ಸದಸ್ಯರು ಹೈಕೋರ್ಟ್ ಮೊರೆಹೋಗಿದ್ದಾರೆ. ಇದೀಗ, ಫೆಬ್ರವರಿ 17ರಂದು ಹೈಕೋರ್ಟ್ನಲ್ಲಿ ಪ್ರಕರಣದ ವಿಚಾರಣೆ ನಡೆಯಲಿದೆ.
ಸಚಿವ ಆರ್.ಶಂಕರ್ ಹೆಸರು ರಾಣೆಬೆನ್ನೂರು ನಗರಸಭೆ ಮತದಾರರ ಪಟ್ಟಿಯ ಜೊತೆಗೆ ದಾವಣಗೆರೆ ವಿಳಾಸ ನೀಡಿ ನಗರ ಪಾಲಿಕೆ ಮತದಾರರ ಪಟ್ಟಿಯಲ್ಲೂ ಸೇರ್ಪಡೆ ಮಾಡಲಾಗಿದೆ. ಹೀಗಾಗಿ ಆರ್.ಶಂಕರ್ ಹೆಸರು ಸೇರ್ಪಡೆ ಪ್ರಶ್ನಿಸಿ ತಕರಾರು ಅರ್ಜಿ ಸಲ್ಲಿಕೆಯಾಗಿದೆ.ಇದೀಗ, ಫೆ.17 ರಂದು ಹೈಕೋರ್ಟ್ ನೀಡುವ ತೀರ್ಪಿನ ಮೇಲೆ ಎಲ್ಲರ ಗಮನ ನೆಟ್ಟಿದೆ.



