ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ ಪೌರಕಾರ್ಮಿಕರಿಗೆ ರಾಜ್ಯ ಸರ್ಕಾರದ ಗೃಹ ಭಾಗ್ಯ ಯೋಜನೆಯಡಿಯಲ್ಲಿ ನಿರ್ಮಾಣಗೊಂಡಿರುವ ಮನೆಗಳ ಕಾಮಗಾರಿ ಸ್ಥಳಕ್ಕೆ ಮೇಯರ್ ಎಸ್ ಟಿ.ವೀರೇಶ್, ಆಯುಕ್ತ ವಿಶ್ವನಾಥ್ ಮುದ್ದಜ್ಜಿ ಭೇಟಿ ನೀಡಿ ವೀಕ್ಷಿಸಿದರು. ಆದಷ್ಟೂ ಬೇಗ ಕಾಮಗಾರಿಯನ್ನು ಪೂರ್ಣಗೊಳಿಸಿ ಪೌರಕಾರ್ಮಿಕರಿಗೆ ಹಸ್ತಾಂತರ ಆಗಬೇಕು. ಆ ನಿಟ್ಟಿನಲ್ಲಿ ತ್ವರಿತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ವಾರ್ಡನ ಪಾಲಿಕೆ ಸದಸ್ಯ ಜಿ.ಡಿ.ಪ್ರಕಾಶ್, ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷ ಎಲ್.ಡಿ.ಗೋಣೇಪ್ಪ, ಪಾಲಿಕೆ ಸದಸ್ಯ ಆರ್ ಎಲ್ ಶಿವಪ್ರಕಾಶ್, ಮಾಜಿ.ಸದಸ್ಯ ಶಿವನಗೌಡ ಟಿ.ಪಾಟೀಲ, ಪಾಲಿಕೆ ಅಧಿಕಾರಿ ಉದಯಕುಮಾರ್, ಸಂದೀಪ್, ವಿನಾಯಕ್ ಸೇರಿದಂತೆ ಮತ್ತಿತರರು ಉಪಸ್ಥಿತಿರದ್ದರು.