ದಾವಣಗೆರೆ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರು ಫೆ. 20 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಬೆಳಿಗ್ಗೆ 10 ಗಂಟೆಗೆ ಹರಿಹರದಲ್ಲಿನ ತುಂಗಾನದಿಯ ತಟ, ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಪಂಚಮಸಾಲಿ ಜಗದ್ಗುರು ಪೀಠದ ವತಿಯಿಂದ ಆಯೋಜಿಸಿರುವ ತುಂಗಭದ್ರಾ ಆರತಿ ಪ್ರಯುಕ್ತ 108 ಯೋಗ ಮಂಟಪಗಳಿಗೆ ಶಿಲಾನ್ಯಾಸ ಮತ್ತು ಸಾರ್ವಜನಿಕ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಜೊತೆ ಭಾಗವಹಿಸುವರು. ನಂತರ ಮಧ್ಯಾಹ್ನ 12.30ಕ್ಕೆ ಹಾಸನ ಜಿಲ್ಲೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.



