Connect with us

Dvgsuddi Kannada | online news portal | Kannada news online

ದಾವಣಗೆರೆ: ಭದ್ರಾ ಡ್ಯಾಂ ನೀರು ಕೊನೆ ಭಾಗಕ್ಕೆ ತಲುಪಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ವಿಫಲ‌; ಶಾಸಕ ಬಿ.ಪಿ.‌ಹರೀಶ್ ಕಿಡಿ

IMG 20240302 214430

ದಾವಣಗೆರೆ

ದಾವಣಗೆರೆ: ಭದ್ರಾ ಡ್ಯಾಂ ನೀರು ಕೊನೆ ಭಾಗಕ್ಕೆ ತಲುಪಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ವಿಫಲ‌; ಶಾಸಕ ಬಿ.ಪಿ.‌ಹರೀಶ್ ಕಿಡಿ

ದಾವಣಗೆರೆ: ಭದ್ರಾ ಡ್ಯಾಂ ನೀರು ಕೊನೆ ಭಾಗದ ರೈತರಿಗೆ ತಲುಪಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ವಿಫಲವಾಗಿದ್ದಾರೆ ಎಂದು ಹರಿಹರ ಬಿಜೆಪಿ ಶಾಸಕ ಬಿ. ಪಿ‌. ಹರೀಶ್ ಕಿಡಿಕಾರಿದರು.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಕೊನೆ ಭಾಗದ ರೈತರಿಗೆ ಭದ್ರಾ ಡ್ಯಾ ನೀರು ಸರಿಯಾಗಿ ತಲುಪಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು, ಸರ್ಕಾರದ ಮೇಲೆ ಒತ್ತಡ ಹೇರಿ ಹೆಚ್ಚಿನ ನೀರು ಬಿಡಿಸುವಲ್ಲಿ ಸೋತಿದ್ದಾರೆ. ಭದ್ರಾ ಕಾಡಾ ಜವಾಬ್ದಾರಿಯನ್ನು ನೀರಾವರಿ ಸಚಿವ ಡಿ. ಕೆ. ಶಿವಕುಮಾರ್ ಅವರು, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಅವರಿಗೆ ನೀಡಿದ್ದಾರೆ. ಆದರೆ, ಸಚಿವ ಮಧು ಬಂಗಾರಪ್ಪ ‌ಅವರು ಶಿವಮೊಗ್ಗ ‌ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಮಾತ್ರ ಅನುಕೂಲ ಮಾಡಿಕೊಟ್ಟಿದ್ದಾರೆ. ಆದರೆ, ದಾವಣಗೆರೆ ಉಸ್ತುವಾರಿ ಸಚಿವರು ಜಿಲ್ಲಾ ರೈತರ ಹಿತ ಕಾಯುತ್ತಿಲ್ಲ ಎಂದು‌ ಆರೋಪಿಸಿದರು.

ಅಡಿಕೆ ತೋಟಕ್ಕೆ ಹತ್ತು ದಿನ‌ ನೀರು ಬಿಟ್ಟು ನಿಲ್ಲಿಸಿದರೆ ಜಲಾಶಯದಲ್ಲಿ‌ ನೀರು ಉಳಿಯುತ್ತದೆ ಎಂಬುದು ಮೇಲ್ಬಾಗದ ರೈತರದ್ದಾಗಿದೆ. ನಿಗಮ ಮಂಡಳಿಗಳ‌ಪಟ್ಟಿ ಬಿಡುಗಡೆಯಾಗಿದೆ ಕಾಡಾ ಅಧ್ಯಕ್ಷ ಸ್ಥಾನ ಚಿಕ್ಕಮಗಳೂರಿಗೆ ಲಭಿಸಿದೆ ಇದರಿಂದ ನಮ್ಮ ಸಮಸ್ಯೆ ಬಗೆಹರಿಯುವುದಿಲ್ಲ. ಕೇವಲ 12 ದಿನ‌ನೀರು ಬಿಟ್ಟರೆ ಕೊನೆ ಭಾಗಕ್ಕೆ ತಲುಪುವುದಿಲ್ಲ. ಮುಂದಿನ ದಿನದಲ್ಲಿ‌ ಇನ್ನೊಂದು ವೇಳೆ ನೀರು ಹರಿಸಲಾಗುತ್ತದೆ. ಈ ವೇಳೆಯಾದರೂ ಎಸ್. ಎಸ್. ಮಲ್ಲಿಕಾರ್ಜುನ್ ಅವರು, ಭದ್ರಾ ಜಲಾಶಯದಿಂದ ನೀರು ಹರಿಸಲು‌ಕ್ರಮ ಕೈಗೊಳ್ಳಲಿ ಎಂದು ಒತ್ತಡ ಹಾಕಲಿ ಎಂದರು‌

ಸಚಿವರಿಗೆ‌ ಬಡ ರೈತನಿಗಿಂತ ಕಾರ್ಖಾನೆ ಮುಖ್ಯವಾಗಿದೆ.‌ ಜಿಲ್ಲಾ ಉಸ್ತುವಾರಿ ಸಚಿವರು ಮಧು ಬಂಗಾರಪ್ಪಗೆ ಒತ್ತಡ ಹಾಕಲಿಲ್ಲ‌.ಸರ್ಕಾರ ಬಜೆಟ್ ಅಧಿವೇಶನ ನಡೆಸಿದ ವೇಳೆ ಬರಗಾಲದ ಬಗ್ಗೆ ಕುಡಿಯುವ ನೀರಿನ‌ ವಿಚಾರವಾಗಿ ಮಾತನಾಡಲಿಲ್ಲ. ಈ ಬಾರಿಯ ಬಜೆಟ್‌ನಲ್ಲಿ ದಾವಣಗೆರೆ ಜಿಲ್ಲೆಗೆ ಯಾವ ಕೊಡುಗೆ ನೀಡಿಲ್ಲ. ಈ‌ ಭಾಗದ ಸಚಿವರು ಶಾಸಕರು‌ ಸರ್ಕಾರಕ್ಕೆ ಒತ್ತಡ ಹಾಕಿಲ್ಲ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top