ದಾವಣಗೆರೆ ಲೋಕಸಭಾ ಕ್ಷೇತ್ರದ ಮತ ಎಣಿಕೆ; ಸಂಚಾರ ಮಾರ್ಗದಲ್ಲಿ ಬದಲಾವಣೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಲೋಕಸಭಾ ಚುನಾವಣೆ ಮತ ಎಣಿಕೆಯು ದಾವಣಗೆರೆ ವಿಶ್ವವಿದ್ಯಾನಿಲಯ ಶಿವಗಂಗೋತ್ರಿಯಲ್ಲಿ ನಾಳೆ (ಜೂ.4) ಎಣಿಕೆ ನಡೆಯಲಿದೆ. ಸಾರ್ವಜನಿಕರ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ಮತ್ತು ಮತ ಎಣಿಕೆ ಕಾರ್ಯ ಸುಗಮವಾಗಿ ನಡೆಯುವ ಸಲುವಾಗಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿ¬ ಬೆಳಿಗ್ಗೆ 6.00ಗಂಟೆ ಯಿಂದ ಸಂಜೆ 6.00 ಗಂಟೆ ವರೆಗೆ ಮತ ಎಣಿಕೆ ಕೇಂದ್ರದ ಮುಂದೆ ಹಾದು ಹೋಗುವ ಬೀರೂರು-ಸಮ್ಮಸಗಿ ರಸ್ತೆಯಲ್ಲಿ ವಾಹನಗಳ ಸಂಚಾರ ನಿಷೇಧಿಸಿದೆ. ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಡಾ.ವೆಂಕಟೇಶ್ ಎಂ.ವಿ. ಆದೇಶಿಸಿದ್ದಾರೆ.

ವಾಹನ ಸಂಚಾರ ಮಾರ್ಗ ; ದಾವಣಗೆರೆ ಯಿಂದ ಸಂತೆಬೆನ್ನೂರು, ಚನ್ನಗಿರಿಗೆ ಹೋಗುವ ವಾಹನ ಸವಾರರು ಶಿರಮಗೊಂಡನಹಳ್ಳಿ, ಹದಡಿ ಮೂಲಕ ಚನ್ನಗಿರಿ ಕಡೆಗೆ ಹೋಗುವುದು. ಚನ್ನಗಿರಿ ಕಡೆಯಿಂದ ಸಂತೆಬೆನ್ನೂರು ಮಾರ್ಗವಾಗಿ ದಾವಣಗೆರೆ ಕಡೆಗೆ ಬರುವವರು ಕುರ್ಕಿಯ ಹತ್ತಿರ ಎಡ ತಿರುವು ತೆಗೆದುಕೊಂಡು ಹದಡಿ ಗ್ರಾಮದಿಂದ ದಾವಣಗೆರೆ ಕಡೆಗೆ ಬರುವುದು ಹಾಗೂ ಚಿತ್ರದುರ್ಗ ಕಡೆಗೆ ಹೋಗುವವರು ಕುರ್ಕಿ ಗ್ರಾಮದ ಹತ್ತಿರ ಬಲ ತಿರುವು ತೆಗೆದುಕೊಂಡು ಆನಗೋಡು ಮುಖಾಂತರ ಚಿತ್ರದುರ್ಗ, ಬೆಂಗಳೂರು ಕಡೆಗೆ ಹೋಗಬೇಕು ಎಂದು ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *