ದಾವಣಗೆರೆ: 2024ರ ಲೋಕಸಭಾ ಚುನಾವಣೆಯನ್ನು ಮುಕ್ತ ಹಾಗೂ ಶಾಂತಿಯುತವಾಗಿ ನಡೆಸಲು ಅತಿಸೂಕ್ಷ್ಮ ಮತಗಟ್ಟೆಗಳ ಸಮೀಕ್ಷೆ ಕೈಗೊಂಡು, ಸುವ್ಯವಸ್ಥಿತ ಚುನಾವಣೆ ನಡೆಸಬೇಕೆಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು.
ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳು ಮತ್ತು ವಿಜಯನಗರ ಜಿಲ್ಲೆಯ ಹರಪನಹಳ್ಳಿ ವಿಧಾನಸಭಾ ಕ್ಷೇತ್ರ ಸೇರಲಿದೆ. ಈ ಹಿಂದೆ ನಡೆದ ಚುನಾವಣಾ
ಸಂದರ್ಭದಲ್ಲಿ ನಡೆದ ಗುಂಪು ಘರ್ಷಣೆ ಮತ್ತು ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಗಳ ಆಧರಿಸಿ ಸಾರ್ವಜನಿಕರು ಮುಕ್ತ ಮತದಾನ ಮಾಡಲು ಬೇಕಾದ ವಾತಾವರಣ
ಕಲಿಸಲು ದುರ್ಬಲ ಪ್ರದೇಶಗಳ ಗುರುತಿಸಿ ಇದರ ವ್ಯಾಪ್ತಿಯಲ್ಲಿನ ಮತಗಟ್ಟೆಗಳನ್ನು ಕ್ರಿಟಿಕಲ್ ಮತಗಟ್ಟೆಗಳೆಂದು ಗುರುತಿಸಿ ಇಲ್ಲಿ ಶಾಂತಯುತವಾಸ ಮತದಾನಕ್ಕೆ ಅಗತ್ಯವಿರುವ ಎಲ್ಲಾ ಕ್ರಮ ಕೈಗೊಳ್ಳಲಾಗುತ್ತದೆ.ಈ ಬಗ್ಗೆ ಅಧಿಕಾರಿಗಳು ಕೂಲಂಕಷ ಪರಿಶೀಲಿಸಿ ವರದಿ ನೀಡಲು ಎಲ್ಲ ತಹಸೀಲ್ದಾರರಿಗೆ
ಸೂಚನೆ ನೀಡಿದರು.
ಎಲ್ಲಾ ತಹಸೀಲ್ದಾರರು ಪ್ರತಿ ಮತಗಟ್ಟೆಗಳ ಪರಿಶೀಲನೆ ನಡೆಸಿ ಮುಕ್ತ, ನ್ಯಾಯ ಸಮ್ಮತ, ಶಾಂತಯುತ ಚುನಾವಣೆ ನಡೆಸಲು ಬೇಕಾದ ಎಲ್ಲಾ ಸಿದ್ಧತೆಗಳ ಕುರಿತು ತಕ್ಷಣವೇ ವರದಿ ನೀಡಲು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ
ಸುರೇಶ್ ಇಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಉಪಸ್ಥಿತರಿದ್ದರು.



