ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ. 7 ರಂದು ಮತದಾನ ನಡೆಯಲಿದ್ದು ನಾಮಪತ್ರ ಸಲ್ಲಿಕೆಗೆ ಮೂರನೇ ದಿನವಾದ ಏಪ್ರಿಲ್ 16 ರಂದು 3 ಅಭ್ಯರ್ಥಿಗಳಿಂದ 3 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ: ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.
ನಾಮಪತ್ರ ಸಲ್ಲಿಸಿದವರ ವಿವರ; ಅಖಿಲ ಭಾರತ ಹಿಂದೂ ಮಹಾ ಪಕ್ಷದಿಂದ ಎ.ಕೆ.ಗಣೇಶ್, ರಾಣಿ ಚೆನ್ನಮ್ಮ ಪಾರ್ಟಿಯಿಂದ ವೀರೇಶ್.ಎಸ್, ಪಕ್ಷೇತರರಾಗಿ ಬರ್ಕತ್ ಅಲಿ ಇಂದು ನಾಮಪತ್ರ ಸಲ್ಲಿಸಿದವರು. ಇದುವರೆಗೆ ಒಟ್ಟು 15 ಅಭ್ಯರ್ಥಿಗಳಿಂದ 18 ನಾಮಪತ್ರಗಳು ಸಲ್ಲಿಕೆಯಾಗಿದೆ.
ಏ.12 ರಂದು ಐದು ಅಭ್ಯರ್ಥಿಗಳಿಂದ 6 ನಾಮಪತ್ರಗಳು, ಏ.15 ರಂದು 8 ಅಭ್ಯರ್ಥಿಗಳಿಂದ 9 ನಾಮಪತ್ರಗಳು ಹಾಗೂ ಏ.16 ರಂದು 3 ಅಭ್ಯರ್ಥಿಗಳಿಂದ 3 ನಾಮಪತ್ರಗಳು ಸಲ್ಲಿಕೆಯಾಗಿವೆ. ಕಾಂಗ್ರೆಸ್ ಪಕ್ಷದಿಂದ ಡಾ; ಪ್ರಭಾ ಮಲ್ಲಿಕಾರ್ಜುನ್ ಅವರು ಮೊದಲ ದಿನ ಎರಡು ಮತ್ತು ಸೋಮವಾರ 2 ನಾಮಪತ್ರ ಸೇರಿ ಒಟ್ಟು 4 ನಾಮಪತ್ರ ಸಲ್ಲಿಸಿದ್ದಾರೆ.



