Connect with us

Dvgsuddi Kannada | online news portal | Kannada news online

ದಾವಣಗೆರೆ: ಲೋಕಸಭಾ ಚುನಾವಣೆ; ಇದುವರೆಗೆ 18 ನಾಮಪತ್ರ ಸಲ್ಲಿಕೆ – ಕಾಂಗ್ರೆಸ್ ಅಭ್ಯರ್ಥಿಯಿಂದ 4 ನಾಮಪತ್ರ

ದಾವಣಗೆರೆ

ದಾವಣಗೆರೆ: ಲೋಕಸಭಾ ಚುನಾವಣೆ; ಇದುವರೆಗೆ 18 ನಾಮಪತ್ರ ಸಲ್ಲಿಕೆ – ಕಾಂಗ್ರೆಸ್ ಅಭ್ಯರ್ಥಿಯಿಂದ 4 ನಾಮಪತ್ರ

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ. 7 ರಂದು ಮತದಾನ ನಡೆಯಲಿದ್ದು ನಾಮಪತ್ರ ಸಲ್ಲಿಕೆಗೆ ಮೂರನೇ ದಿನವಾದ ಏಪ್ರಿಲ್ 16 ರಂದು 3 ಅಭ್ಯರ್ಥಿಗಳಿಂದ 3 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ: ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.

ನಾಮಪತ್ರ ಸಲ್ಲಿಸಿದವರ ವಿವರ; ಅಖಿಲ ಭಾರತ ಹಿಂದೂ ಮಹಾ ಪಕ್ಷದಿಂದ ಎ.ಕೆ.ಗಣೇಶ್, ರಾಣಿ ಚೆನ್ನಮ್ಮ ಪಾರ್ಟಿಯಿಂದ ವೀರೇಶ್.ಎಸ್, ಪಕ್ಷೇತರರಾಗಿ ಬರ್ಕತ್ ಅಲಿ ಇಂದು ನಾಮಪತ್ರ ಸಲ್ಲಿಸಿದವರು. ಇದುವರೆಗೆ ಒಟ್ಟು 15 ಅಭ್ಯರ್ಥಿಗಳಿಂದ 18 ನಾಮಪತ್ರಗಳು ಸಲ್ಲಿಕೆಯಾಗಿದೆ.

ಏ.12 ರಂದು ಐದು ಅಭ್ಯರ್ಥಿಗಳಿಂದ 6 ನಾಮಪತ್ರಗಳು, ಏ.15 ರಂದು 8 ಅಭ್ಯರ್ಥಿಗಳಿಂದ 9 ನಾಮಪತ್ರಗಳು ಹಾಗೂ ಏ.16 ರಂದು 3 ಅಭ್ಯರ್ಥಿಗಳಿಂದ 3 ನಾಮಪತ್ರಗಳು ಸಲ್ಲಿಕೆಯಾಗಿವೆ. ಕಾಂಗ್ರೆಸ್ ಪಕ್ಷದಿಂದ ಡಾ; ಪ್ರಭಾ ಮಲ್ಲಿಕಾರ್ಜುನ್ ಅವರು ಮೊದಲ ದಿನ ಎರಡು ಮತ್ತು ಸೋಮವಾರ 2 ನಾಮಪತ್ರ ಸೇರಿ ಒಟ್ಟು 4 ನಾಮಪತ್ರ ಸಲ್ಲಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top