Connect with us

Dvgsuddi Kannada | online news portal | Kannada news online

ದಾವಣಗೆರೆ ಲೋಕಸಭಾ ಚುನಾವಣೆ; 33 ಅಭ್ಯರ್ಥಿಗಳ ನಾಮಪತ್ರ ಸಿಂಧು; ಹಾಲಿ ಸಂಸದ ಜಿ.ಎಂ.‌ಸಿದ್ದೇಶ್ವರ ಸೇರಿ 12 ನಾಮಪತ್ರ ತಿರಸ್ಕೃತ; ಚುನಾವಣಾಧಿಕಾರಿ ಡಾ.ವೆಂಕಟೇಶ್

ಪ್ರಮುಖ ಸುದ್ದಿ

ದಾವಣಗೆರೆ ಲೋಕಸಭಾ ಚುನಾವಣೆ; 33 ಅಭ್ಯರ್ಥಿಗಳ ನಾಮಪತ್ರ ಸಿಂಧು; ಹಾಲಿ ಸಂಸದ ಜಿ.ಎಂ.‌ಸಿದ್ದೇಶ್ವರ ಸೇರಿ 12 ನಾಮಪತ್ರ ತಿರಸ್ಕೃತ; ಚುನಾವಣಾಧಿಕಾರಿ ಡಾ.ವೆಂಕಟೇಶ್

ದಾವಣಗೆರೆ:‌ ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಸಲ್ಲಿಕೆಯಾಗಿದ್ದ 54 ನಾಮಪತ್ರಗಳಲ್ಲಿ 33 ಅಭ್ಯರ್ಥಿಗಳ ನಾಮಪತ್ರಗಳ 42 ನಾಮಪತ್ರಗಳು ಕ್ರಮಬದ್ದವಾಗಿವೆ. ಹಾಲಿ ಸಂಸದ ಜಿಂ.ಎಂ ಲ. ಸಿದ್ದೇಶ್ವರ ಸೇರಿ 12 ನಾಮಪತ್ರಗಳನ್ನು ತಿರಸ್ಕೃತಗೊಂಡಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಏ.19 ಕೊನೆಯ ದಿನವಾಗಿತ್ತು,. ಒಟ್ಟು 40 ಅಭ್ಯರ್ಥಿಗಳಿಂದ 54 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಇಂದು (ಏ.20) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ನಾಮಪತ್ರಗಳ ಪರಿಶೀಲನೆಯು ಚುನಾವಣಾ ವೀಕ್ಷಕರಾದ ಎಂ.ಲಕ್ಷ್ಮಿ ಹಾಗೂ ಅಭ್ಯರ್ಥಿಗಳ ಸಮ್ಮುಖದಲ್ಲಿ ನಡೆಯಿತು.

ಒಟ್ಟು ಸಲ್ಲಿಕೆಯಾದ 54 ನಾಮಪತ್ರಗಳಲ್ಲಿ 42 ನಾಮಪತ್ರಗಳು ಕ್ರಮಬದ್ದವಾಗಿದ್ದು 12 ನಾಮಪತ್ರಗಳನ್ನು ತಿರಸ್ಕರಿಸಲಾಗಿದೆ. ನಾಮಪತ್ರ ಸಲ್ಲಿಸಿದ 40 ಅಭ್ಯರ್ಥಿಗಳಲ್ಲಿ 7 ಅಭ್ಯರ್ಥಿಗಳ ನಾಮಪತ್ರ ಸಂಪೂರ್ಣವಾಗಿ ತಿರಸ್ಕೃತವಾಗಿವೆ.
ನಾಮಪತ್ರ ಸಂಪೂರ್ಣ ತಿರಸ್ಕೃತರಾದವರ ವಿವರ. ರಾಘವೇಂದ್ರ ಜಿ.ಪಿ ಕೆ.ಆರ್.ಎಸ್ ಪಕ್ಷ, ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸುಭಾನ್ ಖಾನ್, ಸಿ.ಎಂ.ಮಂಜುನಾಥಸ್ವಾಮಿ, ಎಂ.ರಂಗನಾಥಸ್ವಾಮಿ, ಪ್ರಸನ್ನ ಬಿ.ಆರ್, ಕರನಂ ಕೊಟ್ರಪ್ಪ ಮತ್ತು ಬಿಜೆಪಿಯಿಂದ ಪರ್ಯಾಯ ಅಭ್ಯರ್ಥಿಯಾಗಿ ಸಲ್ಲಿಸಿದ್ದ ಜಿ.ಎಂ.ಸಿದ್ದೇಶ್ವರ  ಉಮ್ಮೇದುವಾರಿಕೆ ತಿರಸ್ಕರಿಸಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top