Connect with us

Dvgsuddi Kannada | online news portal | Kannada news online

ದಾವಣಗೆರೆ: ಬಿಜೆಪಿ ಭದ್ರಕೋಟೆಯಲ್ಲಿ ಕಾಂಗ್ರೆಸ್ ಗೆ ಭರ್ಜರಿ ಜಯ; ಗಾಯತ್ರಿ ಸಿದ್ದೇಶ್ವರ್ ಗೆ ಹೀನಾಯ ಸೋಲು

IMG 20240321 224820

ದಾವಣಗೆರೆ

ದಾವಣಗೆರೆ: ಬಿಜೆಪಿ ಭದ್ರಕೋಟೆಯಲ್ಲಿ ಕಾಂಗ್ರೆಸ್ ಗೆ ಭರ್ಜರಿ ಜಯ; ಗಾಯತ್ರಿ ಸಿದ್ದೇಶ್ವರ್ ಗೆ ಹೀನಾಯ ಸೋಲು

ದಾವಣಗೆರೆ: ಬಿಜೆಪಿ ಭದ್ರ ಕೋಟೆಯಾಗಿದ್ದ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಭರ್ಜರಿ ಜಯ ದಾಕಲಿಸಿದ್ದು, ಬಿಜೆಪಿಯ ಗಾಯತ್ರಿ ಸಿದ್ದೇಶ್ವರ್ ಗೆ ಹೀನಾಯ ಸೋಲಾಗಿದೆ.

ದಾವಣಗೆರೆಯಲ್ಲಿ ಸತತ ಗೆಲುವು ಸಾಧಿಸುತ್ತಿದ್ದ ಬಿಜೆಪಿಗೆ ಈ ಬಾರಿ ಸೋಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಗೆಲುವಿನ ನಗೆ ಬೀರಿದ್ದಾರೆ. ಈ ಮೂಲಕ ದಾವಣಗೆರೆ ಲೋಕಸಭೆ ಕ್ಷೇತ್ರದ ಇತಿಹಾಸದಲ್ಲಿ ಸಂಸತ್ ಪ್ರವೇಶಿಸಿದ ಮೊದಲ ಮಹಿಳೆ ಎಂಬ ದಾಖಲೆಯನ್ಬು ಪ್ರಭಾ ಮಲ್ಲಿಕಾರ್ಜುನ್ ಬರೆದಿದ್ದಾರೆ.

ಬಿಜೆಪಿಯಿಂದ ಜಿ. ಎಂ. ಸಿದ್ದೇಶ್ವರ್ ಸತತ ನಾಲ್ಕು ಬಾರಿ ಸಂಸತ್ ಪ್ರವೇಶಿಸಿದ್ದರು. ಈ ಬಾರಿ ಗಾಯತ್ರಿ ಸಿದ್ದೇಶ್ವರ್ ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಎಸ್ .ಎಸ್ .‌ಮಲ್ಲಿಕಾರ್ಜುನ್ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಸತತ ಸೋಲಿನ ಬಳಿಕ ಈ ಬಾರಿ ಕಾಂಗ್ರೆಸ್ ಭರ್ಜರಿ ಜಯ ದಾಖಲಿಸಿದೆ. ಮೂಲಕ ದಾವಣಗೆರೆ ಜಿಲ್ಲೆ ಬಿಜೆಪಿ ಭದ್ರಕೋಟೆ ಎಂಬುದನ್ನು ಛಿದ್ರಗೊಳಿಸಿದ್ದಾರೆ. ಪ್ರಭಾ ಮಲ್ಲಿಕಾರ್ಜನ್ 42,474 ಮತಗಳ ಅಂತರರದಲ್ಲಿ ಗೆಲುವು ದಾಖಲಿಸಿದ್ದಾರೆ.

ಮೊದಲ ಮೂರು ಸುತ್ತಿನಲ್ಲಿ ಡಾ.ಪ್ರಭಾ ಮಲ್ಲಿಕಾರ್ಜುನ ಮುನ್ನಡೆ ಯಲ್ಲಿದ್ದರು. ಆದರೆ, 4ನೇ ಸುತ್ತಿನಲ್ಲಿ ಬಿಜೆಪಿಯ ಗಾಯತ್ರಿ ಸಿದ್ದೇಶ್ವರ ಮುನ್ನಡೆ ಸಾಧಿಸಿದ್ದರು. 5ನೇ ಸುತ್ತಿನಲ್ಲಿ ಮತ್ತೆ ಪ್ರಭಾ ಮಲ್ಲಿಕಾರ್ಜುನ್ 3112 ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ. 6ನೇ ಸುತ್ತಿನಲ್ಲಿ 11,139 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದರು.

7ನೇ ಸುತ್ತಿನಲ್ಲಿ ಪ್ರಭಾ ಮಲ್ಲಿಕಾರ್ಜುನ್ 24,910 ಮತಗಳ ಮುನ್ನಡೆ ಅಂತರ ಹೆಚ್ಚಿಸಿಕೊಂಡಿದ್ದಾರೆ. 8 ನೇ ಸುತ್ತು 29,046 ಮತ, 9ನೇ ಸುತ್ತು 40 ಸಾವಿರ,10 ನೇ ಸುತ್ತು 46 ಸಾವಿರ, 11 ನೇ ಸುತ್ತು 40 ಸಾವಿರ ಹಾಗೂ 12 ಸುತ್ತಿನಲ್ಲಿ 42,683 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.13 ನೇ ರೌಂಡ್ ಮುಕ್ತಾಯಕ್ಕೆ 38900 ಮತಗಳಿಂದ ಮುನ್ನಡೆ.14 ನೇ ರೌಂಡ್ ನಲ್ಲಿ 33369, 15ನೇ ಸುತ್ತಿನ ಮತ ಎಣಿಕೆ ಮುಕ್ತಾಯ ಕಂಡಿದ್ದು, 37 ಸಾವಿರಕ್ಕೂ ಹೆಚ್ಚು ಮತಗಳ ಅಂತರ ಕಾಯ್ದುಕೊಂಡಿದ್ದಾರೆ. ಕೊನೆಯಲ್ಲಿ 42,474 ಮತಗಳ ಅಂತರರದಲ್ಲಿ ಗೆಲುವು ದಾಖಲಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

davangere lokayukta visit 2
davangere mahanagara palike dvgsuddi
davangere lokayukta 2
Morarji Desai school 1
davangere lokayukta visit 1
Advertisement
Advertisement Enter ad code here

Title

To Top