ದಾವಣಗೆರೆ: ಜಿಲ್ಲೆಯಲ್ಲಿ ಶಾಂತಯುತ ಮತದಾನ; ಈ ಬಾರಿ ಹೆಚ್ಚಿದ ಮತದಾನ; ಎಷ್ಟಾಯ್ತು ಮತ ಪ್ರಮಾಣ..?

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: 18 ನೇ ಲೋಕಸಭಾ ಚುನಾವಣೆ ನಡೆಯುತ್ತಿದ್ದು, ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ನಡೆದ ಮತದಾನವು ಸಂಪೂರ್ಣ ಶಾಂತಯುತವಾಗಿ ನಡೆದಿದೆ‌. ಮತಪ್ರಮಾಣದಲ್ಲಿ ಭಾರಿ ಹೆಚ್ಚಳವಾಗಿದೆ. ಯಶಸ್ವಿ ಚುನಾವಣೆ ನಡೆಸಲು ಶ್ರಮಿಸಿದ ಅಧಿಕಾರಿಗಳು ಮತ್ತು ಸಹಕಾರ ನೀಡಿದ ಮತದಾರರು ಹಾಗೂ ಸಾರ್ವಜನಿಕರಿಗೆ ಜಿಲ್ಲಾಡಳಿತದಿಂದ ಅಭಿನಂದನೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ: ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.

ಇದು 11 ಗಂಟೆಯ ವೇಳೆಗೆ ಏರುಗತಿಯಲ್ಲಿ ಸಾಗಿ ಶೇ 23.77 ರಷ್ಟು ದಾಖಲಾಯಿತು. ಮಧ್ಯಾಹ್ನ ಬಿಸಿಲಿನಲ್ಲಿಯು ಸರತಿ ಸಾಲಿನಲ್ಲಿ ನಿಂತ ಜನರಿಂದ ಮತದಾನ ಚುರುಕುಗೊಂಡು ಮಧ್ಯಾಹ್ನ 1 ಗಂಟೆಗೆ ಮತದಾನ ಪ್ರಮಾಣ ಶೇ 42.27 ಕ್ಕೇರಿತು. ಮಧ್ಯಾಹ್ನ 3 ಗಂಟೆಗೆ 57.34 ರಷ್ಟು ದಾಖಲಿಸಿ ಸಂಜೆ 5 ಗಂಟೆಗೆ ಶೇ 70.94 ರಷ್ಟು ಮತದಾನವಾಗಿತ್ತು. ಅಂತಿಮ ಹಂತದ ಮತದಾನ ಪ್ರಮಾಣವನ್ನು ನಿರೀಕ್ಷಿಸಲಾಗಿದ್ದು, 2019 ರ ಚುನಾವಣೆಯಲ್ಲಿ ದಾಖಲಾಗಿದ್ದ ಶೇ 72.96 ರಷ್ಟು ಮತದಾನ ಪ್ರಮಾಣದ ದಾಖಲೆಯನ್ನು ಹಿಂದಿಕ್ಕಿ ಗಣನೀಯ ಮತಪ್ರಮಾಣ ಏರಿಕೆಯಾಗಲಿದೆ ಎಂದು ಆಶಿಸಲಾಗಿದೆ.

ದಾವಣಗೆರೆ ಲೋಕಸಭಾ ಕ್ಷೇತ್ರ ಹರಪನಹಳ್ಳಿ ಸೇರಿದಂತೆ 8 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುತ್ತದೆ. ಇಲ್ಲಿ ಒಟ್ಟು 1946 ಮತಗಟ್ಟೆಗಳಿಂದ 851990 ಪುರುಷ, 857117 ಮಹಿಳಾ, 137 ಇತರೆ ಮತದಾರರು ಸೇರಿ 1709244 ಮತದಾರರಿದ್ದರು.
ಮಂಗಳವಾರ ಬೆಳಗ್ಗೆ ಅಣಕು ಮತದಾನ ನಂತರ 7 ಗಂಟೆಯಿಂದ ಸ್ವಲ್ಪ ಮಂದಗತಿಯಿಂದ ಆರಂಭವಾದ ಮತದಾನ 9 ಗಂಟೆಯವರೆಗೆ ಶೇ 9.13 ರಷ್ಟು ಮತದಾನವಾಗಿತ್ತು.

ಚುನಾವಣಾ ಪ್ರಕ್ರಿಯೆಯಲ್ಲಿ ಕಳೆದ ಮೂರು, ನಾಲ್ಕು ತಿಂಗಳುಗಳಿಂದ ತಂಡಗಳು ನಿರಂತರ ಕೆಲಸ ಮಾಡುತ್ತಾ ಬರಲಾಯಿತು. ಪ್ರಮುಖವಾಗಿ ಮತದಾರರ ನೊಂದಣಿ, ಮತದಾರರ ಜಾಗೃತಿ ಕಾರ್ಯಕ್ರಮಗಳ ಮೂಲಕ ಮತದಾರರಿಗೆ ಮಾಹಿತಿ, ಅರಿವು ಮೂಡಿಸುವ ಕೆಲಸವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷರಾದ ಸುರೇಶ್ ಬಿ.ಇಟ್ನಾಳ್ ರವರು ನಿರಂತರ ಸ್ವೀಪ್ ಕಾರ್ಯಕ್ರಮಗಳ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಿ ಮತದಾರರು ಜಾಗೃತರನ್ನಾಗಿಸಲು ಶ್ರಮಿಸಿದ್ದಾರೆ. ಮತ್ತು ಸುಧೀರ್ಘವಾದ ಚುನಾವಣೆಯಲ್ಲಿ ಸಂಪೂರ್ಣ ಶಾಂತಯುತ ಚುನಾವಣೆ ನಡೆಸಲು ಕಾನೂನು ಸುವ್ಯವಸ್ಥೆ ಕಾಪಾಡಲು ಶ್ರಮಿಸಿದ ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್ ಮತ್ತು ಪೊಲೀಸ್ ಇಲಾಖೆ, ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದ ಸಹಾಯಕ ಚುನಾವಣಾಧಿಕಾರಿಗಳು, ತಹಶೀಲ್ದಾರರು, ಚುನಾವಣಾ ತಂಡಗಳಲ್ಲಿ ಕೆಲಸ ಮಾಡುವ ಮೂಲಕ ಮಾದರಿ ನೀತಿ ಸಂಹಿತೆ ಜಾರಿಗೆ ತರಳು ದಿನದ ಮೂರು ಪಾಳಿಯಲ್ಲಿ ಕೆಲಸ ಮಾಡಿದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕರ್ತವ್ಯವನ್ನು ಮೆಚ್ಚಲಾಗಿದೆ.

ಮತದಾನ ದಿನ ಅಂದಾಜು 8996 ಮತದಾನ ಸಿಬ್ಬಂದಿಗಳು ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗಿ ಚುನಾವಣೆಯನ್ನು ಯಶಸ್ವಿಯಾಗುವಂತೆ ಮಾಡಿದ್ದಾರೆ. ಚುನಾವಣಾ ಆಯೋಗದ ನಿಯಮಗಳನ್ನು ಚಾಚು ತಪ್ಪದೇ ಪಾಲನೆ ಮಾಡುವ ಮೂಲಕ ಮತದಾನದಲ್ಲಿ ಭಾಗಿಯಾದ ಮತದಾರರು ಹಾಗೂ ದಾವಣಗೆರೆ ಜಿಲ್ಲೆಯ ನಾಗರಿಕರ ಸಹಕಾರ ಬಹಳ ದೊಡ್ಡದಾಗಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮನ್ನಣೆ ನೀಡಿದ ಜನತೆಗೆ ಅಭಿನಂದನೆಗಳನ್ನು ತಿಳಿಸಲಾಗಿದೆ.

ಮತ ಎಣಿಕೆ ಜೂನ್ 4; ಲೋಕಸಭಾ ಮತದಾನ ಎಣಿಕೆಯು ಜೂನ್ 4 ರಂದು ಬೆಳಗ್ಗೆ 8 ರಿಂದ ತೋಳಹುಣಸೆ ದಾವಣಗೆರೆ ವಿಶ್ವವಿದ್ಯಾನಿಲಯ ಶಿವಗಂಗೋತ್ರಿಯಲ್ಲಿ ನಡೆಯಲಿದ್ದು ಅಲ್ಲಿಯವರೆಗೆ ಲೋಕಸಭಾ ಕ್ಷೇತ್ರದ 30 ಅಭ್ಯರ್ಥಿಗಳ ಭವಿಷ್ಯ ಸ್ಟ್ರಾಂಗ್ ರೂಂನಲ್ಲಿ ಭದ್ರವಾಗಿರಲಿದ್ದು ಮತ ಎಣಿಕೆ ಪ್ರತಿ ಕ್ಷೇತ್ರದಲ್ಲಿ ಒಟ್ಟು 14 ಟೇಬಲ್‍ಗಳಲ್ಲಿ ನಡೆಯಲಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *