Connect with us

Dvgsuddi Kannada | online news portal | Kannada news online

ಕೋವಿಡ್ ಸಂದಿಗ್ಧ ಪರಿಸ್ಥಿತಿಯಲ್ಲಿ ವೈದ್ಯರು ಶ್ರಮ ವಹಿಸಿ ಕೆಲಸ ಮಾಡಿ: ಸಂಸದ ಜಿ.ಎಂ. ಸಿದ್ದೇಶ್ವರ

ದಾವಣಗೆರೆ

ಕೋವಿಡ್ ಸಂದಿಗ್ಧ ಪರಿಸ್ಥಿತಿಯಲ್ಲಿ ವೈದ್ಯರು ಶ್ರಮ ವಹಿಸಿ ಕೆಲಸ ಮಾಡಿ: ಸಂಸದ ಜಿ.ಎಂ. ಸಿದ್ದೇಶ್ವರ

ದಾವಣಗೆರೆ: ಕೋವಿಡ್ ನಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ವೈದ್ಯರು ಶ್ರಮ ವಹಿಸಿ ಕೆಲಸ ಮಾಡಬೇಕೆಂದು ಸಂಸದ ಜಿ.ಎಂ. ಸಿದ್ದೇಶ್ವರ ವೈದ್ಯರಲ್ಲಿ ಮನವಿ ಮಾಡಿದರು.

ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರಿಗೆ ಸುಗಮ ಆಕ್ಸಿಜನ್ ಪೂರೈಕೆ, ಬೆಡ್ ವ್ಯವಸ್ಥೆ ಮತ್ತು ಔಷಧೋಪಚಾರದ ಕುರಿತು ಚರ್ಚಿಸಲು ಇಂದು ಜಿಲ್ಲಾಧಿಕಾರಿಗಳು, ಎಸ್‍ಪಿ ಹಾಗೂ ವೈದ್ಯರೊಂದಿಗೆ ಸಿ.ಜಿ ಆಸ್ಪತ್ರೆಯಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ ಸಭೆ ನಡೆಸಿದರು.ನಂತರ  ಮಾತನಾಡಿ, ಕಳೆದ ಬಾರಿಗಿಂತ ಕೋವಿಡ್ 2ನೇ ಅಲೆಯಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೋವಿಡ್ ಎದುರಿಸಲು ಎಲ್ಲ ರೀತಿಯಲ್ಲಿ ಸಿದ್ದತೆ ಮಾಡಿಕೊಳ್ಳಬೇಕು ಎಂದರು.

mp cg hospital visit

ಕೋವಿಡ್ ಪತ್ತೆ ಹಚ್ಚಲು ಸಿಟಿ ಸ್ಕ್ಯಾನ್ ಮಾಡಿಸುವವರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಟಿ ಸ್ಕ್ಯಾನ್ ಕೇಂದ್ರದವರು ಸರ್ಕಾರ ನಿಗದಿಪಡಿಸಿಕ್ಕಿಂತ ಹೆಚ್ಚಿನ ದರ ಪಡೆಯುತ್ತಿದ್ದಾರೆಂದು ತಿಳಿದು ಬಂದಿದೆ. ಇಂತಹ ತುರ್ತು ಪರಿಸ್ಥತಿಯಲ್ಲಿ ವೈದ್ಯರು ಹೀಗೆ ಜನರಿಂದ ಹೆಚ್ಚು ದರ ಪಡೆಯಬಾರದು. ನಿಗದಿತ ದರವನ್ನು ಬೋರ್ಡಿನಲ್ಲಿ ಹಾಕಬೇಕು. ಒಂದು ಪಕ್ಷ ಆ ದರಕ್ಕಿಂತ ಹೆಚ್ಚಿಗೆ ಪಡೆದರೆ ರೋಗಿಗಳಯ ಹೆಲ್ಪ್‍ಲೈನ್‍ಗೆ ಕರೆ ಮಾಡಿ ತಿಳಿಸಬೇಕೆಂದರು.

ಹಾಗೂ ಸ್ಕ್ಯಾನರ್ ಬಳಕೆ ಆದ ನಂತರ ಸ್ಯಾನಿಟೈಸ್ ಮಾಡಿ ಮತ್ತೆ ಬಳಸಬೇಕು ಎಂದ ಅವರು ಜಿಲ್ಲಾಧಿಕಾರಿಗಳಿಗೆ ಸಿಟಿ ಸ್ಕ್ಯಾನ್‍ಗೆ ಹೆಚ್ಚು ಹಣ ಪಡೆಯುವವರು ಹಾಗೂ ರೆಮಿಡಿಸಿವರ್ ಅಗತ್ಯವಿಲ್ಲದಿದ್ದರೂ ಈ ಲಸಿಕೆ ನೀಡುವುದನ್ನು ಪರಿಶೀಲಿಸಿ ಕ್ರಮ ಜರುಗಿಸುವಂತೆ ಸೂಚನೆ ನೀಡಿದರು.

ಮೆಡಿಕಲ್ ಆಕ್ಸಿಜನ್ ಪ್ಲಾಂಟ್‍ಗೆ ಹೆಚ್ಚುವರಿ ಆಕ್ಸಿಜನ್ ಪಡೆಯಲು ಹೆಚ್ಚುವರಿ ವಾಹನ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ ಅವರು, 15 ಹೆಚ್ಚುವರಿ ವೆಂಟಿಲೇಟರ್‍ಗಳ ನಿರ್ವಹಣೆಗೆ ನುರಿತ ಸಿಬ್ಬಂದಿ ನಿಯೋಜಿಸುವಂತೆ ತಿಳಿಸಿದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ ಪ್ರಸ್ತುತ ಸದರನ್ ಗ್ಯಾಸ್ ಏಜೆನ್ಸಿಯವರು ಜಿಲ್ಲಾಸ್ಪತ್ರೆಗೆ 18.5 ಕೆ.ಎಲ್ ಆಕ್ಸಿಜನ್ ಪೂರೈಕೆ ಮಾಡುತ್ತಿದ್ದಾರೆ. ಪ್ರಸ್ತುತ ಆಕ್ಸಿಜನ್ ಕೊರತೆ ಇಲ್ಲ. ಆಕ್ಸಿಜನ್ ಬೆಡ್‍ಗಳ ಸಂಖ್ಯೆ ಹೆಚ್ಚಿಸುತ್ತಾ ಹೋದರೆ ಆಕ್ಸಿಜನ್ ಪ್ರೆಷರ್ ಕಡಿಮೆ ಆಗಲಿದ್ದು, ಘಟಕದ ಸಾಮಥ್ರ್ಯಕ್ಕನುಗುಣವಾಗಿ ಬೆಡ್ ವ್ಯವಸ್ಥೆ ಮಾಡಲಾಗಿದೆ ಹಾಗೂ ಜಿಲ್ಲಾಸ್ಪತ್ರೆಯಲ್ಲಿ ರೆಮಿಡಿಸಿವರ್ ದಾಸ್ತಾನು ಇದೆ ಎಂದರು.

ಇದೇ ವೇಳೆ ಜಿಲ್ಲಾಸ್ಪತ್ರೆಯ ಡಾ.ಗಿರೀಶ್ ಕೋವಿಡ್ ವಾರ್ಡ್ ನಿರ್ವಹಿಸುವ ವೈದ್ಯರ ತಂಡಗಳ ಸಂಖ್ಯೆಯನ್ನು 5 ರಿಂದ 6 ಕ್ಕೆ ಹೆಚ್ಚಿಸಬೇಕಿದ್ದು, ಇದಕ್ಕೆ ಅವಶ್ಯಕ ವೈದ್ಯರನ್ನು ಮೆಡಿಕಲ್ ಕಾಲೇಜು ಮತ್ತು ಇನ್‍ಟನ್ರ್ಸ್‍ಗಳನ್ನು ಪಡೆಯಬಹುದೆಂದರು. ಶುಶ್ರೂಷಕರು ಮತ್ತು ಡಿ ಗ್ರೂಪ್‍ಗಳ ಅಗತ್ಯ ಸಹ ಇದ್ದು,  ಇವರನ್ನು ನೇಮಿಸುವಂತೆ ಶುಶ್ರೂಷಾಧಿಕಾರಿ ಮನವಿ ಮಾಡಿದರು.

ಪ್ರೋತ್ಸಾಹ ಧನ : ಬಾಪೂಜಿ ಆಸ್ಪತ್ರೆಯ ಡಾ.ರವಿಯವರು ವೈದ್ಯರು  ತಮ್ಮ ಜೀವದ ಭಯ ತೊರೆದು ಹಗಲು ರಾತ್ರಿ ಕೋವಿಡ್ ರೋಗಿಗಳನ್ನು ನೋಡಿಕೊಳ್ಳುತ್ತಿದ್ದು, ಇವರಿಗೆ ಪ್ರತಿದಿನ ರೂ.1 ಸಾವಿರದಂತೆ ಪ್ರೋತ್ಸಾಹಧನ ನೀಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ ತಮ್ಮ ಟ್ರಸ್ಟ್ ವತಿಯಿಂದ ರೂ.5 ಲಕ್ಷ ನೀಡುವುದಾಗಿ ತಿಳಿಸಿದರು.

ಸಭೆಯಲ್ಲಿ ಪಾಲಿಕೆ ಮಹಾಪೌರ ವೀರೇಶ್ ಎಸ್.ಟಿ., ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ್‍ನಾಯಕ್, ಡಿಹೆಚ್‍ಓ ಡಾ.ನಾಗರಾಜ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಜಯಪ್ರಕಾಶ್, ಡಿಎಸ್‍ಓ ಡಾ.ರಾಘವನ್, ಡಾ.ಶಶಿಧರ್, ಡಾ.ಗಿರೀಶ್, ಡಾ.ರವಿ ಮತ್ತಿತರೆ ತಜ್ಞ ವೈದ್ಯರು ಹಾಜರಿದ್ದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top