Connect with us

Dvgsuddi Kannada | online news portal | Kannada news online

ದಾವಣಗೆರೆ: ಉದ್ಯೋಗ ಖಾತ್ರಿ ಯೋಜನೆಯಡಿ ಅಡಿಕೆ ಬೆಳೆಯ ಎಲ್ಲ ತಾಲೂಕಿಗೆ  ಅನುದಾನ ವಿಸ್ತರಿಸಲು ಪ್ರಸ್ತಾವನೆ; ಸಂಸದ ಸಿದ್ದೇಶ್ವರ 

ಪ್ರಮುಖ ಸುದ್ದಿ

ದಾವಣಗೆರೆ: ಉದ್ಯೋಗ ಖಾತ್ರಿ ಯೋಜನೆಯಡಿ ಅಡಿಕೆ ಬೆಳೆಯ ಎಲ್ಲ ತಾಲೂಕಿಗೆ  ಅನುದಾನ ವಿಸ್ತರಿಸಲು ಪ್ರಸ್ತಾವನೆ; ಸಂಸದ ಸಿದ್ದೇಶ್ವರ 

 ದಾವಣಗೆರೆ: ಇಡೀ  ಜಿಲ್ಲೆಗೆ ಉದ್ಯೋಗಖಾತ್ರಿಯಡಿ ಅಡಿಕೆ ಬೆಳೆಗಾರರಿಗೆ ಅನುದಾನ ನೀಡಲು ಅವಕಾಶ ಮಾಡಿಕೊಡಲು ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸಿ, ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಅನುಮತಿ ಕೊಡಿಸಲು ಪ್ರಯತ್ನಿಸಲಾಗುವುದು ಎಂದು ಸಂಸದ ಜಿ.ಎಂ. ಸಿದ್ದೇಶ್ವರ್ ಹೇಳಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಲಾದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ಡಿಸ್ಟ್ರಿಕ್ಟ್ ಡೆವೆಲಪ್‍ಮೆಂಟ್ ಕೋ-ಆರ್ಡಿನೇಷನ್ & ಮಾನಿಟರಿಂಗ್ ಕಮಿಟಿ-ಡಿಡಿಸಿಎಂಸಿ) ‘ದಿಶಾ’ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕಿನಲ್ಲಿಯೂ ಅಡಿಕೆ ಬೆಳೆಗಾರರು ಹೆಚ್ಚಾಗಿದ್ದಾರೆ. ಹೀಗಾಗಿ ಪ್ರಧಾನಮಂತ್ರಿ ಫಸಲ್‍ ಬೀಮಾ ಯೋಜನೆಯಡಿ ಜಿಲ್ಲೆಯಲ್ಲಿ ಕನಿಷ್ಟ 1 ಲಕ್ಷ ರೈತರನ್ನು ವಿಮಾ ವ್ಯಾಪ್ತಿಗೆ ಸೇರಿಸಬೇಕು, ಈ ದಿಸೆಯಲ್ಲಿ ರೈತರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉದ್ಯೋಗಖಾತ್ರಿ ಯೋಜನೆಯಡಿ ಕಳೆದ ವರ್ಷ 131.75 ಕೋಟಿ ರೂ. ಗಳ ವೆಚ್ಚದಲ್ಲಿ 33.51 ಲಕ್ಷ ಮಾನವ ದಿನಗಳಿಗೆ ಕೂಲಿಕಾರರಿಗೆ ಉದ್ಯೋಗ ನೀಡಲಾಗಿದೆ. ವಿವಿಧ ತೋಟಗಾರಿಕೆ ಬೆಳೆಗಳಿಗೆ ನರೇಗಾದಡಿ ಕನ್ವರ್ಜೆನ್ಸ್ ಮಾಡಿಕೊಳ್ಳಲು ಅವಕಾಶ ನೀಡಿದಂತೆಯೇ, ಜಿಲ್ಲೆಯ ಹೊನ್ನಾಳಿ ಮತ್ತು ಚನ್ನಗಿರಿ ತಾಲ್ಲೂಕಿಗೆ ಮಾತ್ರ ಅಡಿಕೆ ಬೆಳೆಗೂ ಅವಕಾಶವನ್ನು ಸರ್ಕಾರ ಕಳೆದವರ್ಷ ನೀಡಿದೆ. ಮಲೆನಾಡು ಅಭಿವೃದ್ಧಿ ಮಂಡಳಿ ವ್ಯಾಪ್ತಿಗೆ ಒಳಪಡುವ ತಾಲ್ಲೂಕುಗಳಿಗೆ ಮಾತ್ರ ಅಡಿಕೆ ಬೆಳೆ ಸೇರ್ಪಡೆಗೆ ಅವಕಾಶವಿದೆ ಎಂಬ ಕಾರಣ ನೀಡಿ, ಇಡೀ ಜಿಲ್ಲೆಗೆ ವಿಸ್ತರಣೆ ಮಾಡುವಂತೆ ಕೋರಿದ ಪ್ರಸ್ತಾವನೆ ತಿರಸ್ಕೃತಗೊಂಡಿದೆ ಎಂದು ಜಿ.ಪಂ. ಉಪಕಾರ್ಯದರ್ಶಿ ಆನಂದ್ ತಿಳಿಸಿದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top