ದಾವಣಗೆರೆ: ಕೇಂದ್ರ ಸರ್ಕಾರದ 9 ವರ್ಷಗಳ ಸಾಧನೆಯ ಛಾಯಾಚಿತ್ರ ಪ್ರದರ್ಶನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕೇಂದ್ರ ಸಂವಹನ ಇಲಾಖೆ ಶಿವಮೊಗ್ಗ ವತಿಯಿಂದ ಹರಿಹರದಲ್ಲಿ ಸೆಪ್ಟೆಂಬರ್ 26 ರಿಂದ 28 ರ ವರೆಗೆ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಕೇಂದ್ರ ಸರ್ಕಾರದ ಒಂಭತ್ತು ವರ್ಷಗಳ ಸಾಧನೆಗಳ ಛಾಯಾಚಿತ್ರ ಪ್ರದರ್ಶನ ಮತ್ತು ಪೋಷಣ್ ಮಾಸಾಚರಣೆ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಸಂಸದ ಜಿ.ಎಂ.ಸಿದ್ದೇಶ್ವರ ಉದ್ಘಾಟಿಸಿದರು.

ಕೃಷಿ ಸಿಂಚಯಿ ಯೋಜನೆ, ಸಾಯಿಲ್ ಹೆಲ್ತ್ ಕಾರ್ಡ್, ಕಿಸಾನ್ ಸಮ್ಮಾನ್, ನೀಮ್ ಕೋಟೆಡ್ ಯೂರಿಯಾ, ಮೇರಿ ಮಾಠಿ ಮೇರಾ ದೇಶ್, ಏಕ ಭಾರತ ಶ್ರೇಷ್ಠ ಭಾರತ, ಆಯುಷ್ಮಾನ್ ಭಾರತ್, ಒಂದು ರಾಷ್ಟ್ರ ಒಂದು ಮಾರುಕಟ್ಟೆ, ಒಂದು ತೆರಿಗೆ, ಕೃಷಿ ನಿರ್ವಹಣೆಯಲ್ಲಿ ಪರ್ಯಾಯ ಪೋಷಕಾಂಶಗಳ ಬಳಕೆಗೆ ಉತ್ತೇಜನ ನೀಡುವ ಪಿಎಂ ಪ್ರಣಾಮ್ ಯೋಜನೆಗಳು ಗಮನ ಸೆಳೆದವು.

ವಿಶೇಷವಾಗಿ ಪೋಷಣ್ ಮಾಸಾಚರಣೆ ಅಂಗವಾಗಿ ಪೋಷಕಾಂಶ ಆಹಾರ ಪದಾರ್ಥಗಳ ಪ್ರದರ್ಶನ ನಡೆಯಿತು. ಕೇಂದ್ರ ಸರ್ಕಾರದ ಮಾತೃವಂದನಾ ಯೋಜನೆಯಡಿ ಆರು ಸಾವಿರ ರೂಪಾಯಿ ಸೌಲಭ್ಯ ಪಡೆದ ನೂರಕ್ಕೂ ಅಧಿಕ ತಾಯಂದಿರು ಭಾಗವಹಿಸಿದ್ದರು.ಹರಿಹರ ಶಾಸಕ ಬಿ.ಪಿಹರೀಶ್ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ, ಅಧ್ಯಕ್ಷರಾದ ನಿಂಬಕ್ಕ ನಿಂಗಪ್ಪ ಚಂದಾಪುರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಪೂರ್ಣಿಮಾ, ಕೇಂದ್ರ ಸಂವಹನ ಇಲಾಖೆಯ ಕ್ಷೇತ್ರ ಪ್ರಚಾರಾಧಿಕಾರಿ ಅಕ್ಷತಾ ಸಿ.ಹೆಚ್, ಲಕ್ಷ್ಮೀಕಾಂತ ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *