ದಾವಣಗೆರೆ: ಸರ್ಕಾರಿ ಸ್ವಾಮ್ಯದ ಬಿಎಸ್ ಎನ್ ಎಲ್ ಪುನಃಶ್ಚೇತನಕ್ಕೆ ಏನು ಕ್ರಮ ಕೈಗೊಳ್ಳಲಾಗಿದೆ ಎಂದು ಸಂಸದ ಜಿಎಂ ಸಿದ್ದೇಶ್ವರ ಲೋಕದಭೆಯ ಚಳಿಗಾಲ ಅಧಿವೇಶನದಲ್ಲಿ ಪ್ರಶ್ನೆ ಮಾಡಿದ್ದಾರೆ.
ಕಳೆದ ಐದು ವರ್ಷಗಳಲ್ಲಿ ಬಿ.ಎಸ್.ಎನ್.ಎಲ್ ನಷ್ಟದಲ್ಲಿದೆ. ಇದರಿಂದ ಬಳಕೆದಾರರು ಬೇರೆ ಕಂಪನಿಗಳಿಗೆ ವಲಸೆ ಹೋಗುತ್ತಿದ್ದಾರೆ. ಇದನ್ನು ಉತ್ತಮಗೊಳಿಸಲು ಹಾಗೂ ಕಂಪನಿಯ ನೌಕರರ ಭದ್ರರೆಗೆ ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿದ್ದಾರೆ.
ಇದಕ್ಕೆ ಉತ್ತರಿಸಿದ ಕೇಂದ್ರ ಸಂವಹನ ಖಾತೆ ಸಚಿವ ಅಶ್ವಿನಿ ವೈಷ್ಣವ್, ಬಿ.ಎಸ್.ಎನ್.ಎಲ್ ಪುನಃಶ್ಚೇತನಕ್ಕೆ ಸರ್ಕಾರ 1.64 ಲಕ್ಷ ಕೋಟಿಯಷ್ಟು ದೊಡ್ಡ ಪ್ಯಾಕೇಜ್ ಘೋಷಿಸಿದ್ದು, ಇದರಿಂದ ಕಂಪನಿ ಸುಧಾರಣೆ ಮಾಡಲಾಗುವುದು ಎಂದು ತಿಳಿಸಿದರು.
ಯುಪಿಎ ಅವಧಿಯಲ್ಲಿ ಬಿಎಸ್ಎಲ್ಎನ್ ನಿಧಿಯನ್ನು ಬೇರೆ ಕಡೆ ವರ್ಗಾಯಿಸಿದ್ದರಿಂದ ಈ ಸ್ತುತಿಗೆ ಬಂದಿದೆ. ಮೇಕ್ ಇನ್ ಇಂಡಿಯಾದಿಂದಾಗಿ 4ಜಿ ಮತ್ತು 5ಜಿ ತಂತ್ರಜ್ಞಾನವನ್ನು ದೇಶಿಯವಾಗಿ ಅಭಿವೃದ್ಧಿಗೊಳಿಸಿದ್ದು, ಅತ್ಯಂತ ಕಡಿಮೆ ಅವಧಿಯಲ್ಲಿ 5ಜಿ ತಂತ್ರಜ್ಞಾನವನ್ನು ಹಂತ ಹಂತವಾಗಿ ದೇಶದಾದ್ಯಂತ ಅನುಷ್ಠಾನಗೊಳಿಸಲಾಗುದು ಎಂದರು.



