Connect with us

Dvgsuddi Kannada | online news portal | Kannada news online

ಕಾಂಗ್ರೆಸ್ ಗೆ ಧಮ್ ಇದ್ರೆ ಚುನಾವಣೆ ಮುನ್ನವೇ ಲಿಂಗಾಯತ ಮುಖ್ಯಮಂತ್ರಿ ಘೋಷಣೆ ಮಾಡಲಿ; ಸಂಸದ ಜಿ.ಎಂ.‌ಸಿದ್ದೇಶ್ವರ

ದಾವಣಗೆರೆ

ಕಾಂಗ್ರೆಸ್ ಗೆ ಧಮ್ ಇದ್ರೆ ಚುನಾವಣೆ ಮುನ್ನವೇ ಲಿಂಗಾಯತ ಮುಖ್ಯಮಂತ್ರಿ ಘೋಷಣೆ ಮಾಡಲಿ; ಸಂಸದ ಜಿ.ಎಂ.‌ಸಿದ್ದೇಶ್ವರ

ದಾವಣಗೆರೆ: ಕಾಂಗ್ರೆಸ್​ ಪಕ್ಷಕ್ಕೆ ಧಮ್ ಇದ್ರೆ ಚುನಾವಣೆ ಮುನ್ನವೇ ಲಿಂಗಾಯತ ಮುಖ್ಯಮಂತ್ರಿ ಘೋಷಣೆ ಮಾಡಲಿ ಎಂದು ಕೈ ನಾಯಕರಿಗೆ ಸಂಸದ ಜಿ.ಎಂ.ಸಿದ್ದೇಶ್ವರ್​ ಸವಾಲು ಹಾಕಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಬಿ.ಎಸ್.ಯಡಿಯೂರಪ್ಪ ಅವರನ್ನು ಈ ಹಿಂದೆ ಅ ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದರು.ಈಗಲೂ ಕೂಡ ಲಿಂಗಾಯತ ಸಿಎಂ ಬಗ್ಗೆ ಒಮ್ಮತದ ಅಭಿಪ್ರಾಯವಿದೆ. ಅದೇ ರೀತಿ ಕಾಂಗ್ರೆಸ್ ಗೆ ಧಮ್ ಇದ್ದರೆ ಘೋಷಣೆ ಮಾಡಲಿ ಎಂದರು.

ಲಿಂಗಾಯತರು ಬಿಜೆಪಿ ಬಿಟ್ಟು ಹೋಗಲ್ಲ. ಮತ್ತೆ 130 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರಲಿದ್ದೇವೆ. ಬೊಮ್ಮಾಯಿ ಅವರೇ ಸಿಎಂ ಆಗಲಿದ್ದಾರೆ. ನಾನು ಈಗಾಗಲೇ ಪ್ರತಿ ಕ್ಷೇತ್ರದಲ್ಲಿಯೂ ಚುನಾವಣಾ ಪ್ರಚಾರ ಮಾಡುತ್ತಿದ್ದೇನೆ. ಕೆಲವರು ಸುಳ್ಳು, ಅಪಪ್ರಚಾರ ಮಾಡ್ತಿದ್ದಾರೆ. ಕಾಂಗ್ರೆಸ್​ನವರು ಭ್ರಮೆಯಲ್ಲಿದ್ದಾರೆ. ನಾವು ದಾವಣಗೆರೆಯ ಏಳು ಕ್ಷೇತ್ರಗಳನ್ನೂ ಗೆಲ್ಲಲಿದ್ದೇವೆ. ದಾವಣಗೆರೆ ಉತ್ತರ ದಕ್ಷಿಣ, ಮಾಯಕೊಂಡದಲ್ಲಿ ಬಂಡಾಯ ಶಮನವಾಗಲಿದೆ ಎಂದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top