Connect with us

Dvgsuddi Kannada | online news portal | Kannada news online

ದಾವಣಗೆರೆ: ಜೈಲಿನಿಂದ ಬಿಡುಗಡೆಯಾಗಿ ನಾಲ್ಕೇ ದಿನಕ್ಕೆ ಮುರುಘಾ ಶ್ರೀ ಮತ್ತೆ ಬಂಧನ

ಪ್ರಮುಖ ಸುದ್ದಿ

ದಾವಣಗೆರೆ: ಜೈಲಿನಿಂದ ಬಿಡುಗಡೆಯಾಗಿ ನಾಲ್ಕೇ ದಿನಕ್ಕೆ ಮುರುಘಾ ಶ್ರೀ ಮತ್ತೆ ಬಂಧನ

ದಾವಣಗೆರೆ: ಜೈಲಿನಿಂದ ಬಿಡುಗಡೆಯಾಗಿ ನಾಲ್ಕೇ ದಿನಕ್ಕೆ ಮುರುಘಾ ಶರಣರನ್ನು ಮತ್ತೆ ಬಂಧನ ಮಾಡಲಾಗಿದೆ. ನ.16ರಂದು ಪೋಕ್ಸೊ ಮೊದಲನೇ ಪ್ರಕರಣದಿಂದ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಚಿತ್ರದುರ್ಗ ಜೈಲಿನಿಂದ ದಾವಣಗೆರೆಯ ವಿರಕ್ತ ಮಠಕ್ಕೆ ಬಂದು ಶ್ರೀಗಳು ನೆಲೆಸಿದ್ದರು. ಇದೀಗ 2ನೇ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಬಿಡುಗಡೆ ಆಗಿ ನಾಲ್ಕೇ ದಿನಕ್ಕೆ ‌ಇಂದು (ನ.20) ಮತ್ತೆ ಬಂಧಿಸಲಾಗಿದೆ.

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ಪೋಕ್ಸೊ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಕಳೆದ 14 ತಿಂಗಳುಗಳ ಕಾಲ ಜೈಲು ಸೇರಿದ್ದರು. ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿ ಬಂಧನದಲ್ಲಿದ್ದ ಅವರಿಗೆ 4 ದಿನದ ಹಿಂದಷ್ಟೇ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿತ್ತು.

ಜಾಮೀನಿನ ಮೇಲೆ ಬಿಡುಗಡೆಗೊಂಡ ಮುರುಘಾ ಶ್ರೀಗಳು 2ನೇ ಪೋಕ್ಸೊ ಪ್ರಕರಣದಲ್ಲಿ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯಕ್ಕೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಆದ್ರೇ ಈ ಆದೇಶವನ್ನು ಪಾಲಿಸದೇ ವೀಡಿಯೋ ಕಾನ್ಫೆರೆನ್ಸ್ ಮೂಲಕ ಹಾಜರಾಗಿದ್ದರು. ಇದನ್ನು ಸರ್ಕಾರಿ ವಕೀಲರು ಪ್ರಶ್ನಿಸಿದ್ದರು. ಜೊತೆಗೆ ಆದೇಶ ಉಲ್ಲಂಘನೆ ಸಂಬಂಧ ಅವರ ವಿರುದ್ಧ ಕಾನೂನು ಕ್ರಮಕ್ಕೆ ಮನವಿ ಮಾಡಿದ್ದರು.

ಸರ್ಕಾರಿ ವಕೀಲರ ಆಕ್ಷೇಪದ ನಂತರ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯವು ಮುರುಘಾ ಶ್ರೀ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಗೊಳಿಸಿದೆ. ಈ ಹಿನ್ನಲೆಯಲ್ಲಿ ಇಂದು ದಾವಣಗೆರೆಯ ವಿರಕ್ತ ಮಠಕ್ಕೆ ತೆರಳಿದಂತ ಚಿತ್ರದುರ್ಗ ಜಿಲ್ಲೆಯ ಗ್ರಾಮಾಂತರ ಠಾಣೆಯ ಪೊಲೀಸರು, ಮುರುಘಾ ಶ್ರೀಗಳನ್ನು 2ನೇ ಪೊಕ್ಸೊ ಪ್ರಕರಣದಲ್ಲಿ ಬಂಧಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top