ದಾವಣಗೆರೆ: ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಗಳಿಗೆ ಪರಮಾಧಿಕಾರ ನೀಡಲಾಗಿದೆ. ಯಾರಿಗೂ ಸಚಿವರಾಗಬೇಕೆಂಬ ಅವಸರ ಇಲ್ಲ ಮುಖ್ಯಮಂತ್ರಿ ಗಳ ಬಳಿ 7 ಖಾತೆಗಳಿದ್ದು, ಯಶಸ್ವಿಯಾಗಿ ನಿಭಾಯಿಸುತ್ತಿದ್ದಾರೆ ಎಂದು ಬಿಜೆಪಿ ರಾಜಾಧ್ಯಕ್ಷ ನಳಿನ್ಕುಮಾರ್ ಕಟೀಲ್ಹೇಳಿದರು.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಸಚಿವರು ಅವರವರ ಜವಾಬ್ಧಾರಿಯನ್ನು ಚೆನ್ನಾಗಿ ನಿರ್ವಹಿಸುತ್ತಿದ್ದಾರೆ. ಈ ಹಿಂದಿನ ಮುಖ್ಯಮಂತ್ರಿ ಬಳಿ 13 ಖಾತೆಗಳಿದ್ದವು. ಹೀಗಾಗಿ ಸಂಪುಟ ವಿಸ್ತರಣೆ ಬಗ್ಗೆ ಯಾರಿಗೂ ಅವಸರವಿಲ್ಲ ಜನಗಳಿಗೆ ಉತ್ತಮ ಆಡಳಿತ ನೀಡುವುದು ಬಿಜೆಪಿ ಗುರಿ ಎಂದರು.
ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷದ ಕೈ ಕಾಲು ಹಿಡಿಯುತ್ತಿವೆ ಎಂಬ ಕುಮಾರಸ್ವಾಮಿ ಹೇಳಿಕೆ ಪ್ರತಿಕ್ರಿಯಿಸಿ , ಗ್ರಾ ಪಂ ಪಂಚಾಯತಿ ಚುನಾವಣೆಯಲ್ಲಿ 45 ಸಾವಿರ ಬಿಜೆಪಿ ಬೆಂಬಲಿತ ಕಾರ್ಯಕರ್ತರು ಗೆದ್ದಿದ್ದಾರೆ. ಒಟ್ಟು 3500 ಗ್ರಾ ಪಂಯಲ್ಲಿ ಅಧ್ಯಕ್ಷರಾಗುವ ಅವಕಾಶವಿದೆ. ಯಾವ ಪಕ್ಷದ ಜೊತೆ ಹೊಂದಾಣಿಕೆ ಒಪ್ಪಂದದ ಪ್ರಶ್ನೆಯೇ ಇಲ್ಲ. ಯಾವ ಪಕ್ಷದ ಕಾಲು ಹಿಡಿಯುವ ಅವಶ್ಯಕತೆ ಬಿಜೆಪಿಗಿಲ್ಲ. ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವ ಸಾಮಾರ್ಥ್ಯ ಬಿಜೆಪಿಗೆ ಇದೆ ಎಂದು ತಿಳಿಸಿದರು.



