Connect with us

Dvgsuddi Kannada | online news portal | Kannada news online

ಸಚಿವ ಸಂಪುಟ ವಿಸ್ತರಣೆ ಸಿಎಂಗೆ ಪರಮಾಧಿಕಾರ: ಕಟೀಲ್

ಪ್ರಮುಖ ಸುದ್ದಿ

ಸಚಿವ ಸಂಪುಟ ವಿಸ್ತರಣೆ ಸಿಎಂಗೆ ಪರಮಾಧಿಕಾರ: ಕಟೀಲ್

ದಾವಣಗೆರೆ: ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಗಳಿಗೆ ಪರಮಾಧಿಕಾರ ನೀಡಲಾಗಿದೆ. ಯಾರಿಗೂ ಸಚಿವರಾಗಬೇಕೆಂಬ ಅವಸರ ಇಲ್ಲ ಮುಖ್ಯಮಂತ್ರಿ ಗಳ ಬಳಿ 7 ಖಾತೆಗಳಿದ್ದು,  ಯಶಸ್ವಿಯಾಗಿ ನಿಭಾಯಿಸುತ್ತಿದ್ದಾರೆ ಎಂದು ಬಿಜೆಪಿ ರಾಜಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ಹೇಳಿದರು.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಸಚಿವರು ಅವರವರ ಜವಾಬ್ಧಾರಿಯನ್ನು ಚೆನ್ನಾಗಿ ನಿರ್ವಹಿಸುತ್ತಿದ್ದಾರೆ. ಈ ಹಿಂದಿನ ಮುಖ್ಯಮಂತ್ರಿ ಬಳಿ  13 ಖಾತೆಗಳಿದ್ದವು. ಹೀಗಾಗಿ ಸಂಪುಟ ವಿಸ್ತರಣೆ ಬಗ್ಗೆ ಯಾರಿಗೂ  ಅವಸರವಿಲ್ಲ ಜನಗಳಿಗೆ ಉತ್ತಮ ಆಡಳಿತ ನೀಡುವುದು  ಬಿಜೆಪಿ ಗುರಿ ಎಂದರು.

ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷದ ಕೈ ಕಾಲು ಹಿಡಿಯುತ್ತಿವೆ ಎಂಬ ಕುಮಾರಸ್ವಾಮಿ  ಹೇಳಿಕೆ ಪ್ರತಿಕ್ರಿಯಿಸಿ , ಗ್ರಾ ಪಂ  ಪಂಚಾಯತಿ ಚುನಾವಣೆಯಲ್ಲಿ 45 ಸಾವಿರ ಬಿಜೆಪಿ ಬೆಂಬಲಿತ ಕಾರ್ಯಕರ್ತರು ಗೆದ್ದಿದ್ದಾರೆ. ಒಟ್ಟು 3500 ಗ್ರಾ ಪಂಯಲ್ಲಿ ಅಧ್ಯಕ್ಷರಾಗುವ ಅವಕಾಶವಿದೆ. ಯಾವ ಪಕ್ಷದ ಜೊತೆ ಹೊಂದಾಣಿಕೆ ಒಪ್ಪಂದದ ಪ್ರಶ್ನೆಯೇ ಇಲ್ಲ.  ಯಾವ ಪಕ್ಷದ ಕಾಲು ಹಿಡಿಯುವ ಅವಶ್ಯಕತೆ ಬಿಜೆಪಿಗಿಲ್ಲ. ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವ ಸಾಮಾರ್ಥ್ಯ ಬಿಜೆಪಿಗೆ ಇದೆ‌‌ ಎಂದು ತಿಳಿಸಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top