ದಾವಣಗೆರೆ: ನೆಹರು ಯುವ ಕೇಂದ್ರದಿಂದ ನನ್ನ ಭಾರತ-ವಿಕಸಿತ್ ಭಾರತ ಕುರಿತ@2047 ವಿಷಯದ ಕುರಿತು ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯನ್ನು ಜ.11 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಬಿ.ಎಸ್.ಚನ್ನಬಸಪ್ಪ ಮಹಾವಿದ್ಯಾಲಯದಲ್ಲಿ ಏರ್ಪಡಿಸಲಾಗಿದೆ.
ಸ್ಪರ್ಧೆಯಲ್ಲಿ ಭಾಗವಹಿಸುವರು 15 ರಿಂದ 29 ವರ್ಷ ವಯೋಮಾನದೊಳಗಿರಬೇಕು. ಜ.10 ರೊಳಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.ನಂ :9901863789 ಸಂಪರ್ಕಿಸಲು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಭುಕ್ಯಾ ಸಂಜೀವ ತಿಳಿಸಿದ್ದಾರೆ.



