Connect with us

Dvgsuddi Kannada | online news portal | Kannada news online

ದಾವಣಗೆರೆ: ರಾಷ್ಟ್ರೀಯ ಮತದಾರರ ದಿನಾಚರಣೆ ; ರಾಜ್ಯ ಮಟ್ಟದ ಪ್ರಬಂಧ, ಚಿತ್ರಕಲಾ ಸ್ಪರ್ಧೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಆಯ್ಕೆ

Voting NE 1

ದಾವಣಗೆರೆ

ದಾವಣಗೆರೆ: ರಾಷ್ಟ್ರೀಯ ಮತದಾರರ ದಿನಾಚರಣೆ ; ರಾಜ್ಯ ಮಟ್ಟದ ಪ್ರಬಂಧ, ಚಿತ್ರಕಲಾ ಸ್ಪರ್ಧೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಆಯ್ಕೆ

ದಾವಣಗೆರೆ: 14ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಮತದಾನಕ್ಕಿಂತ ಇನ್ನೊಂದಿಲ್ಲ ನಾನು ಖಚಿತವಾಗಿ ಮತದಾನ ಮಾಡುವೆ ಎಂಬ ಧ್ಯೇಯವಾಕ್ಯದೊಂದಿಗೆ ವಿದ್ಯಾರ್ಥಿಗಳಿಗೆ ಏರ್ಪಡಿಸಲಾದ ರಾಜ್ಯ ಮಟ್ಟದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಭಾಗವಹಿಸಿ ಆಯ್ಕೆಯಾಗಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ಅಧ್ಯಕ್ಷರಾದ ಸುರೇಶ್ ಇಟ್ನಾಳ್ ಹಾಗೂ ನೋಡಲ್ ಅಧಿಕಾರಿಗಳು ಅಭಿನಂದಿಸಿದ್ದಾರೆ.

ಸಿಂಧು.ಜಿ.ಎನ್ ಸರ್ಕಾರಿ ಪ್ರೌಢಶಾಲೆ, ಮೆಳ್ಳೆಕಟ್ಟೆ ಪ್ರಬಂಧ ಸ್ಪರ್ಧೆ(ಕನ್ನಡ) ಪ್ರಥಮ ಸ್ಥಾನ, ಗಾನಶ್ರೀ.ಜಿ.ರಾಯ್ಕರ್ ಮೋತಿ ವೀರಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು, ದಾವಣಗೆರೆ. ಪ್ರಬಂಧ ಸ್ಪರ್ಧೆ(ಇಂಗ್ಲಿಷ್) ದ್ವಿತೀಯ, ವೀರಭದ್ರಸ್ವಾಮಿ.ಜಿ.ಎಂ ಸ್ಟೆಲ್ಲಾ ಮೇರಿಸ್ ಪ್ರೌಢಶಾಲೆ, ಹೊನ್ನಾಳಿ ಇವರು ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಇದೇ ಜನವರಿ 25 ರಂದು ನಡೆಯುವ ರಾಷ್ಟ್ರೀಯ ಮತದಾರರ ದಿನಾಚರಣೆ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top