Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ IMA ಹಾಲ್ ನಲ್ಲಿ ದಾಂಡಿಯಾ ರಾಸ್

ದಾವಣಗೆರೆ

ದಾವಣಗೆರೆ: ನಾಳೆ IMA ಹಾಲ್ ನಲ್ಲಿ ದಾಂಡಿಯಾ ರಾಸ್

ದಾವಣಗೆರೆ: ನಾಳೆ (ಅ.1) ಸಂಜೆ 7.30ಕ್ಕೆ ನಗರದ ಎಂ.ಸಿ.ಸಿ. ‘ಬಿ’ ಬ್ಲಾಕ್, ಈಜುಕೊಳದ ಹಿಂಭಾಗದಲ್ಲಿರುವ ಐಎಂಎ ಹಾಲ್ ನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ರಿದ್ಧಿ ಸಿದ್ಧಿ ಫೌಂಡೇಶನ್ ಆಶ್ರಯದಲ್ಲಿ 15 ನೇ ವರ್ಷದ ನವರಾತ್ರಿ ದಸರಾ ಹಬ್ಬದ ಪ್ರಯುಕ್ತ ಭಾರತೀಯ ಸಂಪ್ರದಾಯದಂತೆ ‘ ದಾಂಡಿಯಾ ರಾಸ್’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಶಾಸಕ ಶಾಮನೂರು ಶಿವಶಂಕರಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಕೈಗಾರಿಕೋದ್ಯಮಿ ಅಥಣಿ ವೀರಣ್ಣ, ಹೊಟೇಲ್ ಉದ್ಯಮಿ ಅಣಬೇರು ರಾಜಣ್ಣ, ಮಹಾನಗರ ಪಾಲಿಕೆ ಮಾಜಿ ಸದಸ್ಯ ದಿನೇಶ್. ಕೆ. ಶೆಟ್ಟಿ, ಪಾಲಿಕೆ ವಿಪಕ್ಷ ನಾಯಕ ಗಡಿಗುಡಾಳ ಮಂಜುನಾಥ, ಮಹಾನಗರ ಪಾಲಿಕೆ ಸದಸ್ಯ ಎ. ನಾಗರಾಜ್, ಯುವ ಮುಖಂಡ ಶ್ರೀನಿವಾಸ ದಾಸಕರಿಯಪ್ಪ, ಹರಪನಹಳ್ಳಿಯ ಉದ್ಯಮಿ ಉತ್ತಮಚಂದ ಜೈನ, ರಿದ್ಧಿ ಸಿದ್ಧಿ ಫೌಂಡೇಶನ್ ಅಧ್ಯಕ್ಷ ವಿಜಯಕುಮಾರ್, ಕಾರ್ಯದರ್ಶಿ ರಾಜು ಭಂಡಾರಿ, ಯುವ ಮುಖಂಡ ಶ್ರೀಕಾಂತ್ ಬಗರೆ ಮತ್ತಿತರರು ಭಾಗವಹಿಸಲಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top