ದಾವಣಗೆರೆ: ಜವಾಹರ್ ನವೋದಯ ವಿದ್ಯಾಲಯದಿಂದ 6 ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ದೇವರಹಳ್ಳಿ ಯಲ್ಲಿರುವ ಜವಾಹರ್ ನವೋದಯ ವಿದ್ಯಾಲಯಕ್ಕೆ 2024-25ನೇ ಸಾಲಿಗೆ 6 ನೇ ತರಗತಿ ಪ್ರವೇಶಾತಿ ಪರೀಕ್ಷೆಗೆ ಜಿಲ್ಲೆಯ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು 2012ರ ಮೇ ರಿಂದ 2014ರ ಜುಲೈ ಮಾಹೆಯೊಳಗೆ ಜನಿಸಿದವರಾಗಿರಬೇಕು. ಜಿಲ್ಲೆಯ ಸರ್ಕಾರಿ ಶಾಲೆ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಯಲ್ಲಿ 3 ಮತ್ತು 4 ನೇ ತರಗತಿಯನ್ನು ಪೂರ್ಣಗೊಳಿಸಿ, ಪ್ರಸಕ್ತ ಸಾಲಿನಲ್ಲಿ 5 ನೇ ತರಗತಿ ಅದ್ಯಯನ ಮಾಡುತ್ತಿರಬೇಕು. ಅರ್ಹ ವಿದ್ಯಾರ್ಥಿಗಳು ಆಗಸ್ಟ್ 10 ರೊಳಗಾಗಿ ವಿದ್ಯಾಲಯದ ಅಧಿಕೃತ ವೆಬ್‍ಸೈಟ್ https://navodaya.gov.in ನಿಂದ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು.

ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಮಾಹಿತಿಯನ್ನು ತಿದ್ದುವ ಅವಕಾಶ ಇರುವುದಿಲ್ಲ.2024 ಜನವರಿ 20 ಪ್ರವೇಶ ಪರೀಕ್ಷಾ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಆರ್.ಜಿ ಬಡಿಗೇರ್-6363998301, ರವೀಂದ್ರ. ಡಿ.ಕೆ-9741194198, ಎಂ.ವೈ ಕುರುಗುಂದ (ಚನ್ನಗಿರಿ)-9483738275, ತಿಪ್ಪೇಸ್ವಾಮಿ(ದಾವಣಗೆರೆ ಉತ್ತರ)- 7892307035, ಸೌರಭ(ದಾವಣಗೆರೆ ದಕ್ಷಿಣ)- 9482731680, ನಾಗೇಶ್(ಹರಿಹರ)- 9449941170, ಹಿರೇಮಠ (ಹೊನ್ನಾಳಿ)- 9448294794, ದತ್ತಾತ್ರೇಯ. ಕೆ(ಜಗಳೂರು)-7483073517 ಸಂಪರ್ಕಿಸಲು ಜವಹರ್ ನವೋದಯ ವಿದ್ಯಾಲಯ, ದೇವರಹಳ್ಳಿ, ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *