Connect with us

Dvgsuddi Kannada | online news portal | Kannada news online

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಎಸ್.‌ಎಸ್ ಮಲ್ಲಿಕಾರ್ಜುನಗೆ ಮತ್ತೊಮ್ಮೆ ಮಂತ್ರಿ ಭಾಗ್ಯ

ದಾವಣಗೆರೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಎಸ್.‌ಎಸ್ ಮಲ್ಲಿಕಾರ್ಜುನಗೆ ಮತ್ತೊಮ್ಮೆ ಮಂತ್ರಿ ಭಾಗ್ಯ

ದಾವಣಗೆರೆ: ಕಾಂಗ್ರೆಸ್ ಹಿರಿಯ ಶಾಸಕ ಹಾಗೂ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರ ಪುತ್ರ ಎಸ್.ಎಸ್ ಮಲ್ಲಿಕಾರ್ಜುನ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ನೂತನ ಸಚಿವರಾಗಿ ಇಂದು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರಿಗೆ ಈ ಬಾರಿ ಮತ್ತೊಮ್ಮೆ ಮಂತ್ರಿ ಭಾಗ್ಯ ಸಿಕ್ಕಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಜೊತೆಗೆ ಕಾಂಗ್ರೆಸ್‌ ಹೈಕಮಾಂಡ್‌ ಸತತ ಮೂರು ದಿನಗಳ ಕಾಲ ಸಮಾಲೋಚನೆ ನಡೆಸಿ ಸಂಪುಟ ವಿಸ್ತರಣೆಯ ಕಗ್ಗಂಟನ್ನು ಬಗೆಹರಿಸಿದೆ. ಇಂದು ರಾಜಭವನದ ಗಾಜಿನ ಮನೆಯಲ್ಲಿ ಕಾಂಗ್ರೆಸ್​ನ 24 ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನೆರವೇರಿತು. ನೂತನ ಸಚಿವರಿಗೆ ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು.

2013ರಲ್ಲಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಮಲ್ಲಿಕಾರ್ಜುನ ಅವರಿಗೆ ಹೈ ಕಮಾಂಡ್ ಮತ್ತೊಮ್ಮೆ ಮಣೆ ಹಾಕಿದೆ. ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಮಲ್ಲಿಕಾರ್ಜುನ್ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಜಿಲ್ಲೆಯಲ್ಲಿ ನಡೆದ ಸಿದ್ದರಾಮಯ್ಯ ಅಮೃತ ಮಹೋತ್ಸವದ ಯಶಸ್ವಿಯಾಗಿ ನಡೆಸಿದ್ದರು.

ಬಿಕಾಂ ಪದವೀಧರರಾಗಿರುವ ಮಲ್ಲಿಕಾರ್ಜುನ ಅವರು 1989ರಲ್ಲಿ ದಾವಣಗೆರೆ ಮತ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 1999ರಲ್ಲಿ ದಾವಣಗೆರೆ ಉತ್ತರ ಹಾಗೂ ದಕ್ಷಿಣ ಕ್ಷೇತ್ರಗಳಾಗಿ ವಿಂಗಡಣೆಯಾದ ಬಳಿಕ ಗೆಲುವು ಸಾಧಿಸಿ ಎಸ್.ಎಂ ಕೃಷ್ಣ ಸರ್ಕಾರದಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆ ಸಚಿವರಾಗಿದ್ದರು. 2013ರಲ್ಲಿ ಗೆಲುವು ಸಾಧಿಸಿದ್ದರು.

2016ರಲ್ಲಿ ಶಾಮನೂರು ಶಿವಶಂಕರಪ್ಪ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಿ ಮಲ್ಲಿಕಾರ್ಜುನ್ ಅವರಿಗೆ ಸಚಿವ ಸ್ಥಾನ‌ ನೀಡಲಾಗಿತ್ತು. ಅಂದು ಅವರು ತೋಟಗಾರಿಕೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾಗಿದ್ದರು. 2018 ರಲ್ಲಿ ಬಿಜೆಪಿ ಶಾಸಕ ಎಸ್. ಎ. ರವೀಂದ್ರನಾಥ್ ವಿರುದ್ಧ ಸೋಲು ಕಂಡಿದ್ದರು. ಇದೀಗ 2023ರ ಚುನಾವಣೆಯಲ್ಲಿ ಮತ್ತೆ ಗೆಲುವು ಸಾಧಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top