ದಾವಣಗೆರೆ: ದಾವಣಗೆರೆ ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ ಡಾ. ಕೆ ಅರುಣ್ ಅವರು ಎಸ್ಪಿ ಸಿ.ಬಿ. ರಿಷ್ಯಂತ್ ಅವರಿಂದ ಅಧಿಕಾರ ವಹಿಸಿಕೊಂಡರು.
ವಿಧಾನಸಭಾ ಚುನಾವಣೆ ಹಿನ್ನೆಲೆ ದಾವಣಗೆರೆ ಎಸ್.ಪಿ. ರಿಷ್ಯಂತ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಕಲಬುರ್ಗಿ ಜಿಲ್ಲೆಯ ಎಸ್ ಪಿ ಹಾಗೂ ಪೊಲೀಸ್ ತರಬೇತಿ ಪ್ರಾಂಶುಪಾಲರಾಗಿದ್ದ ಡಾ.ಅರುಣ್ ಅವರನ್ನು ದಾವಣಗೆರೆ ನೂತನ ಎಸ್ಪಿಯಾಗಿ ನೇಮಕ ಮಾಡಲಾಗಿದೆ. ಸಿ.ಬಿ ರಿಷ್ಯಂತ್ ಅವರಿಗೆ ಯಾವುದೇ ಸ್ಥಳವನ್ನು ತೋರಿಸದೆ ವರ್ಗಾವಣೆ ಮಾಡಲಾಗಿದೆ.