ದಾವಣಗೆರೆ: ಎಸ್ಪಿ ಉಮಾ ಪ್ರಶಾಂತ್ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮೂರು ವರ್ಷಗಳಿಂದ ದಾವಣಗೆರೆ ಎಸ್ಪಿಯಾಗಿ ಕಾರ್ಯ ನಿರ್ವಹಿಸಿದ್ದ ಉಮಾ ಪ್ರಶಾಂತ್ ಅವರ ಸ್ಥಾನಕ್ಕೆ ಇಂಟಲಿಜೆನ್ಸ್ ಎಸ್ಪಿಯಾಗಿದ್ದ ಶೇಖರ್ ಹೆಚ್. ತೆಕ್ಕಣ್ಣನವರ್ ವರ್ಗಾವಣೆ ಮಾಡಿ ಆದೇಶ ಮಾಡಲಾಗಿದೆ.
ದಾವಣಗೆರೆ: ಅಡಿಕೆ ಬೆಲೆಯಲ್ಲಿ ಮತ್ತೆ ಭರ್ಜರಿ ಏರಿಕೆ; ಇಂದಿನ ಕನಿಷ್ಠ, ಗರಿಷ್ಠ ದರ ಎಷ್ಟಿದೆ…?
ಎಸ್ಪಿ ಉಮಾ ಪ್ರಶಾಂತ್ ಕಾರ್ಯ ಬಗ್ಗೆ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದರು. ಎಸ್ಪಿ ಅವರು ಸಚಿವ ಎಸ್ .ಎಸ್ ಮಲ್ಲಿಕಾರ್ಜುನ ಮನೆ ನಾಯಿಗಳಂತೆ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದಾದ ಬಳಿಕ ಜಿಲ್ಲೆಯಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಸಮರ ಸಾರಿದ್ದ ಎಸ್ಪಿ, ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಡ್ರಗ್ಸ್ ಕೇಸ್ ನಲ್ಲಿ ಹೆಚ್ಚಿನದಾಗಿ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು. ಅದರಲ್ಲೂ ಸಚಿವರ ಆಪ್ತರು ಕಾರ್ಯಕರ್ತರನ್ನು ಬಂಧಿಸಿದ್ದರು. ಇದು ಆಡಳಿತ ಪಕ್ಷದಕ್ಕೆ ಮುಜುಗರ ತಂದಿತ್ತು.
ಇನ್ನೂ ಇನ್ ಸ್ಪೆಕ್ಟರ್ ಗಾಯತ್ರಿ ಅವರ ಮೇಲೆ ಹಲ್ಲೆ ಕೇಸ್ ನಲ್ಲಿ ಕಾಂಗ್ರೆಸ್ ಮುಖಂಡ ಮಾಜಿ ಧೂಡಾ ಅಧ್ಯಕ್ಷ ಅಯೂಬ್ ಪೈಲ್ವಾನ್ ಮೂವರು ಪುತ್ರರ ಬಂಧನವಾಗಿತ್ತು.



