ದಾವಣಗೆರೆ: ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ (ಎಸ್ಪಿ) ಉಮಾ ಪ್ರಶಾಂತ್ ಅವರನ್ನು ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ಐಪಿಎಸ್ ಅಧಿಕಾರಿ ಶೇಖರ್ ಎಚ್. ತೆಕ್ಕಣ್ಣನವರ್ ದಾವಣಗೆರೆ ನೂತನ ಎಸ್ಪಿಯಾಗಿ ಇಂದು (ಫೆ.11) ಅಧಿಕಾರ ಸ್ವೀಕರಿಸಿದರು.
ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಸ್ಥಾಪಿಸಲು ಅರ್ಜಿ ಆಹ್ವಾನ
ಬೆಂಗಳೂರಿನ ಗುಪ್ತಚರ ವಿಭಾಗದ ಎಸ್ಪಿಯಾಗಿದ್ದ ಎಚ್ .ಟಿ. ಶೇಖರ್ ದಾವಣಗೆರೆಗೆ ಎಸ್ಪಿಯಾಗಿದ್ದ ಉಮಾ ಪ್ರಶಾಂತ್ ಅವರಿಂದ ಅಧಿಕಾರ ಸ್ವೀಕರಿಸಿದರು.
ದಾವಣಗೆರೆ: ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದಿಂದ ಹೊಸ ಬಡಾವಣೆ; ನಿವೇಶನಕ್ಕೆ ಅರ್ಜಿ ಆಹ್ವಾನ
ನೂತನ ಎಸ್ಪಿ ಹಿನ್ನೆಲೆ ಏನು..?
ನೂತನ ಎಸ್ಪಿ ಎಚ್ .ಟಿ. ಶೇಖರ್ ಮೂಲತಃ ಬಾಗಲಕೋಟೆ ಜಿಲ್ಲೆಯವರು. ಪಶು ವೈದ್ಯಕೀಯ ವಿಷಯದಲ್ಲಿ ಸ್ನಾತಕೋತ್ತರ ಪದವೀಧರರು. ತೀರ್ಥಹಳ್ಳಿ, ಹಿರಿಯೂರು ಉಪ ವಿಭಾಗದಲ್ಲಿ ಡಿವೈಎಸ್ಪಿ, ಶಿವಮೊಗ್ಗ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, ಮೈಸೂರು ಪೊಲೀಸ್ ಕಮಿಷನರೇಟ್ ಡಿಸಿಪಿ, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿಯಾಗಿ ಕಾರ್ಯನಿರ್ವಹಿಸಿದ್ದಾರೆ.
ಅಕ್ರಮ ಚಟುವಟಿಕೆ ಬಗ್ಗೆ ಹೇಳಿದ್ದೇನು..?
ಅಧಿಕಾರ ಸ್ವೀಕಾರ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಅಕ್ರಮ ಮರಳು, ಡ್ರಗ್ಸ್ ಸೇರಿದಂತೆ ಅಕ್ರಮ, ಕಾನೂನುಬಾಹಿರ ಚಟುವಟಿಕೆ ಬಗ್ಗೆ ಈಗಾಗಲೇ ದಾವಣಗೆರೆ ಜಿಲ್ಲಾ ಪೊಲೀಸ್ ಬಹಳ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಮುಂದೆಯೂ ಸಹ ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಲಾಗಿವುದು ಎಂದು ಎಚ್ಚರಿಕೆ ನೀಡಿದರು.
ರಾಜಕೀಯ ಮುಖಂಡರ ಹಸ್ತಕ್ಷೇಪ ಬಗ್ಗೆ
ರಾಜಕೀಯ ಮುಖಂಡರ ಹಸ್ತಕ್ಷೇಪ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾನೂನು ಎಲ್ಲರಿಗೂ ಒಂದೇ. ಕಾನೂನು ರೀತಿಯಲ್ಲಿ ಯಾವ ರೀತಿ ಕ್ರಮಕೈಗೊಳ್ಳಬೇಕು, ಆ ರೀತಿ ಎಲ್ಲರಿಗೂ ಸಮಾನ ದೃಷ್ಠಿಯಿಂದ ಕ್ರಮ ಕೈಗೊಳ್ಳುತ್ತೇವೆ. ಜನಪ್ರತಿನಿಧಿಗಳು, ಸಾರ್ವಜಕರು ಯಾರೇ ಬಂದು ಸಲಹೆ ಸೂಚನೆ ಕೊಟ್ಟರು ಅದನ್ನು ಸ್ವೀಕರಿಸುತ್ತೇವೆ. ಬಳಿಕ ಕಾನೂನು ರೀತಿಯಲ್ಲಿ ಕ್ರಮ ಜರುಗುಸುತ್ತೇವೆ ಎಂದರು.
ಪೊಲೀಸ್ ಮೇಲೆ ಹಲ್ಲೆ ಕುರಿತು
ಇತ್ತೀಚೆಗೆ ಧೂಡಾ ಮಾಜಿ ಅಧ್ಯಕ್ಷ ಅಯೂಬ್ ಪೈಲ್ವಾನ್ ಪುತ್ರರು ಪೊಲೀಸ್ ಅಧಿಕಾರಿಗಳ ಮೇಲೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ, ಜಿಲ್ಲೆಯಲ್ಲಿ ಮಹಿಳಾ ಇನ್ ಸ್ಪೆಕ್ಟರ್ ಗೆ ಹಲ್ಲೆ ಮಾಡಿದ ಬಗ್ಗೆ ಮಾಧ್ಯಮ ಮೂಲಕ ಕೇಳಿ ತಿಳಿದುಕೊಂಡಿದ್ದೇನೆ. ಈ ಬಗ್ಗೆ ತನಿಖೆ ಯಾವ ಹಂತದಲ್ಲಿದೆ ಎಂಬುದನ್ನು ತಿಳಿದುಕೊಳ್ಳುತ್ತೇನೆ. ತನಿಖೆಯಲ್ಲಿ ಯಾವುದೇ ಲೋಪದೋಷ ಆಗದಂತೆ ನೋಡಿಕೊಳ್ಳುತ್ತೇವೆ. ಸಾರ್ವಜನಿಕರಿಗೆ ರಕ್ಷಣೆ ಕೊಡುವ ಪೊಲೀಸರ ಮೇಲೆ ಹಲ್ಲೆ ನಡೆದಿರುವುದು ಗಂಭೀರವಾದ ವಿಚಾರ. ಈ ಬಗ್ಗೆ ತಾರ್ಕಿಕ ಅಂತ್ಯವಾಡುತ್ತೇವೆ ಎಂದರು.



