Connect with us

Dvgsuddi Kannada | online news portal | Kannada news online

ದಾವಣಗೆರೆ: ಶ್ರೀರಾಮಮಂದಿರ‌ ನಿರ್ಮಾಣಕ್ಕೆ ಸಮರ್ಪಿಸಲಿರುವ 12 ಲಕ್ಷದ ವೆಚ್ಚದ ಬೆಳ್ಳಿ ಇಟ್ಟಿಗೆಗೆ ಸಾಂಕೇತಿಕ ಪೂಜೆ

IMG 20221214 075944

ದಾವಣಗೆರೆ

ದಾವಣಗೆರೆ: ಶ್ರೀರಾಮಮಂದಿರ‌ ನಿರ್ಮಾಣಕ್ಕೆ ಸಮರ್ಪಿಸಲಿರುವ 12 ಲಕ್ಷದ ವೆಚ್ಚದ ಬೆಳ್ಳಿ ಇಟ್ಟಿಗೆಗೆ ಸಾಂಕೇತಿಕ ಪೂಜೆ

ದಾವಣಗೆರೆ: ಅಯೋಧ್ಯೆ ಶ್ರೀರಾಮಮಂದಿರ ನಿರ್ಮಾಣಕ್ಕೆ ಸಮರ್ಪಿಸುವ 12ಲಕ್ಷ ವೆಚ್ಚದ 15 ಕೆಜಿ ತೂಕದ ಬೆಳ್ಳಿ ಇಟ್ಟಿಗೆಯನ್ನು ಪಿಜೆ ಬಡಾವಣೆಯ ರಾಘವೇಂದ್ರಸ್ವಾಮಿ ಮಠದಲ್ಲಿ ಉಡುಪಿ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ ಸಮ್ಮುಖದಲ್ಲಿ ಸಾಂಕೇತಿಕವಾಗಿ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗಿಯಾಗಿದ್ದರು. ನಂತರ ಮಾತನಾಡಿದ ಪೇಜಾವರ ಶ್ರೀಗಳು, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗುತ್ತಿದ್ದು, 2024ನೇ ವರ್ಷದ ಮಕರ ಸಂಕ್ರಾಂತಿ ವೇಳೆ ರಾಮನ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ದಾವಣಗೆರೆ ಭಕ್ತರು ಸೇರಿ ನಿರ್ಮಿಸಿದ ಬೆಳ್ಳಿ ಇಟ್ಟಿಗೆಯ ದರ್ಶನ ಮಾಡಿದ್ದೇವೆ. ಮುಂಬರುವ ದಿನದಲ್ಲಿ ಭಕ್ತರು, ಜನಪ್ರತಿನಿಧಿಗಳ ಸಮ್ಮುಖದಲ್ಲಿ, ಸೂಕ್ತ ಮುಹೂರ್ತದಲ್ಲಿ ಬೆಳ್ಳಿ ಇಟ್ಟಿಗೆ ಸಮರ್ಪಣೆ ನಡೆಯಲಿ ಎಂದರು.

ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್ ಮಾತನಾಡಿ, ಜನವರಿ 21ರ ನಂತರ ಭವ್ಯ ಕಾರ್ಯಕ್ರಮ ಮಾಡಿ ಶ್ರೀಗಳ ಮೂಲಕ ಭಕ್ತಿ ಸಮರ್ಪಿಸಲಾಗುವುದು ಎಂದರು.

ಮೇಯರ್ ಜಯಮ್ಮ ಗೋಪಿನಾಯ್ಕ, ಉಪಮೇಯರ್ ಗಾಯತ್ರಿಬಾಯಿ ಖಂಡೋಜಿರಾವ್, ಧೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಮಾಜಿ ಮೇಯರ್ ಎಸ್.ಟಿ.ವೀರೇಶ್, ಪಾಲಿಕೆ ಸದಸ್ಯರಾದ ಎಲ್.ಡಿ.ಗೋಣೆಪ್ಪ, ಸೋಗಿ ಶಾಂತಕುಮಾರ್, ಮುಖಂಡರಾದ ಪಿ.ಸಿ.ಶ್ರೀನಿವಾಸ್, ಶಿವನಗೌಡ ಪಾಟೀಲ್, ಟಿಂಕರ್ ಮಂಜಣ್ಣ, ಜಯಮ್ಮ, ಗೌತಮ್ ಜೈನ್, ತರಕಾರಿ ಶಿವು ಇತರರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top