Connect with us

Dvgsuddi Kannada | online news portal | Kannada news online

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ವತಿಯಿಂದ 2019-20ನೇ ಸಾಲಿನ ವಿಶೇಷ ಕೇಂದ್ರಿಯ ನೆರವಿನಡಿ (ಎಸ್‍ಸಿಎ ಯಿಂದ ಎಸ್‍ಸಿಎಸ್‍ಪಿ) ಜಿಲ್ಲೆಯ ಪರಿಶಿಷ್ಟ ಜಾತಿಯ ನಿರುದ್ಯೋಗ ವಿದ್ಯಾವಂತ ಯುವಕ-ಯುವತಿಯರಿಗೆ ಉಚಿತವಾಗಿ ತರಬೇತಿ ಕಾರ್ಯಕ್ರಮವನ್ನು ದಾವಣಗೆರೆಯ ಕಿಯೋನಿಕ್ಸ್ ಸಂಸ್ಥೆ ಕೇಂದ್ರದಲ್ಲಿ ಏರ್ಪಡಿಸಲಾಗಿದೆ.

ಅಕೌಂಟಿಂಗ್ ಮತ್ತು ಟ್ಯಾಲಿ, ಕಂಪ್ಯೂಟರ್ ಪ್ರೋಗ್ರಾಮರ್ ತರಬೇತಿ, ಕಾಲ್‍ಸೆಂಟರ್ ತರಬೇತಿ 50 ಅಭ್ಯರ್ಥಿಗಳಿಗೆ. ಕಂಪ್ಯೂಟರೈಸ್ಡ್ ಫ್ಯಾಷನ್ ಡಿಸೈನಿಂಗ್ ಹಾಗೂ ಟೈಲರಿಂಗ್ ತರಬೇತಿ 44 ಅಭ್ಯರ್ಥಿಗಳಿಗೆ. ಡಿಜಿಟಲ್ ಮಾರ್ಕೆಟಿಂಗ್ 110 ಜನ, ಸೈಬರ್ ಸೆಕ್ಯೂರಿಟಿ-100, ಹಾಗೂ 250 ಅಭ್ಯರ್ಥಿಗಳಿಗೆ ಆಂಡ್ರಾಯಿಡ್ ಟ್ರೈನಿಂಗ್ (ಸ್ಮಾರ್ಟ್ ಮೊಬೈಲ್ ಫೋನ್) ತರಬೇತಿ ಉಚಿತವಾಗಿ ಆಯೋಜಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿಯನ್ನು ಏ.9 ರಂದು ಅಂಬೇಡ್ಕರ್ ನಿಗಮದ ಜಿಲ್ಲಾ ಕಚೇರಿಯಲ್ಲಿ ಉಚಿತವಾಗಿ ವಿತರಿಸಲಾಗುವುದು. ಭರ್ತಿ ಮಾಡಿದ ಅರ್ಜಿಯನ್ನು ಏ.30 ರೊಳಗೆ ಅಗತ್ಯ ಶೈಕ್ಷಣಿಕ ಅಂಕ ಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್‍ನೊಂದಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ನಂ.337/16ಎ-16 ಗಣೇಶ್ ಲೇಔಟ್ 1ನೇ ಕ್ರಾಸ್, ಪಿ.ಬಿ.ರಸ್ತೆ, ದಾವಣಗೆರೆ. ದೂರವಾಣಿ ಸಂಖ್ಯೆ: 08192-258647 ಕ್ಕೆ ಸಂಪರ್ಕಿಸಬಹುದು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top