Connect with us

Dvgsuddi Kannada | online news portal | Kannada news online

ದಾವಣಗೆರೆ; ಸಂಸದ ಜಿ.ಎಂ ಸಿದ್ದೇಶ್ವರ ಮಾಲೀಕತ್ವದ ಕಂಪನಿಯಿಂದ ಅಕ್ರಮ ಕಲ್ಲು ಗಣಿಗಾರಿಕೆ; ಕಾನೂನು ಕ್ರಮಕ್ಕೆ ಎಸ್. ಆರ್.‌ ಹಿರೇಮಠ ಆಗ್ರಹ

1636733804687

ದಾವಣಗೆರೆ

ದಾವಣಗೆರೆ; ಸಂಸದ ಜಿ.ಎಂ ಸಿದ್ದೇಶ್ವರ ಮಾಲೀಕತ್ವದ ಕಂಪನಿಯಿಂದ ಅಕ್ರಮ ಕಲ್ಲು ಗಣಿಗಾರಿಕೆ; ಕಾನೂನು ಕ್ರಮಕ್ಕೆ ಎಸ್. ಆರ್.‌ ಹಿರೇಮಠ ಆಗ್ರಹ

ದಾವಣಗೆರೆ: ಸಂಸದ ಜಿ.ಎಂ ಸಿದ್ದೇಶ್ವರ ಮಾಲೀಕತ್ವದ ಕಂಪನಿಯಿಂದ ಹಾವೇರಿ ಜಿಲ್ಲೆಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು, ಸಂಸದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಕಾರ್ಯಕರ್ತ ಎಸ್ .ಆರ್ .‌ಹಿರೇಮಠ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ಹಾವೇರಿ ಜಿಲ್ಲೆಯ ರಟ್ಟೀಹಳ್ಳ ತಾಲೂಕು ಚಟ್ನಿಹಳ್ಳಿ ಹಾಗೂ ಇತರ ಗ್ರಾಮಗಳಲ್ಲಿ ಜಿ.ಎಂ.ಶುಗರ್ಸ್ ಕಂಪನಿಯಿಂದ ಅಕ್ರಮವಾಗಿ ಕಲ್ಲುಗಣಿಗಾರಿಕೆ ನಡೆಸಲಾಗುತ್ತಿದ್ದು, ಕಂಪನಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಹಾಗೂ ಕಂಪನಿಯ ಮಾಲೀಕರಾದ ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ್ ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಅಕ್ರಮ ಗಣಿಗಾರಿಕೆ ಆಧಾರದ ಹಿನ್ನೆಲೆಯಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ್ ವಿರುದ್ಧ ಗಂಭೀರ ಪ್ರಕರಣ ದಾಖಲಿಸಬೇಕು. ಈ ಬಗ್ಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಕ್ರಮ ಬಗ್ಗೆ ವರದಿ ಸಲ್ಲಿಸಿದೆ. ಈ ಬಗ್ಗೆ ಸಮಾಜ ಪರಿವರ್ತನ ಸಮುದಾಯ ಸಂಘಟನೆ ಸೇರಿದಂತೆ ಇತರ ಸಂಘಟನೆಗಳು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯವರಿಗೆ ಅನೇಕ ಸಲ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಮಂಜೂರಾದ ಜಾಗವನ್ನು ಹೊರತುಪಡಿಸಿ ಬೇರೆಡೆ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದು, ತಕ್ಷಣವೇ ಮಂಜೂರಾದ ಗಣಿಗಾರಿಕೆಯಿಂದ ತೆಗೆದ ಕಲ್ಲು ಕ್ರಷರ್‍ಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಕೈಕೊಳ್ಳಬೇಕು‌ ಎಂದರು.

ಈ ಸಂದರ್ಭದಲ್ಲಿ ಎಂ.ಸಿ ಹಾವೇರಿ, ಎನ್.ಸಿ.ದೊಡ್ಡಮನಿ, ಪಾಷಾ, ಬಲ್ಲೂರು ರವಿಕುಮಾರ್ ಮತ್ತಿತರರು ಇದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top