ದಾವಣಗೆರೆ: ವೃದ್ಧೆ‌‌ ಹತ್ಯೆ‌ ಮಾಡಿ ಚಿನ್ನಾಭರಣ ದೋಚಿ‌ ಪರಾರಿಯಾದ ದುಷ್ಕರ್ಮಿಗಳು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಒಂಟಿಯಾಗಿ ಜೀವನ ಸಾಗಿಸುತ್ತಿದ್ದ ವೃದ್ಧೆಯನ್ನು ಹತ್ಯೆಗೈದ ದುಷ್ಕರ್ಮಿಗಳು, 73 ಗ್ರಾಂ. ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ನಡೆದಿದೆ.

ದಾವಣಗೆರೆ: ಬಾರ್ ಕಳ್ಳತನ ಮಾಡಿದ 7 ಆರೋಪಿಗಳ ಅರೆಸ್ಟ್; 3.35 ಲಕ್ಷ ಮೌಲ್ಯದ ಸ್ವತ್ತು ವಶ

ಮನೆಯಲ್ಲಿ ಒಂಟಿಯಾಗಿದ್ದ ಕಮಲಮ್ಮ (64) ಎಂಬ ವೃದ್ಧೆಯನ್ನು ಉಸಿರುಗಟ್ಟಿ ಕೊಲೆ ಮಾಡಿದ್ದಾರೆ. ವೃದ್ಧೆಗೆ ಸೇರಿದ ಸುಮಾರು 73 ಗ್ರಾಂ ಚಿನ್ನಾಭರಣಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಈ ಘಟನೆ ಇಡೀ ಗ್ರಾಮದ ಜನರಲ್ಲಿ ಆತಂಕ ಉಂಟು ಮಾಡಿದೆ. ಎಸ್ಪಿ ಉಮಾ ಪ್ರಶಾಂತ್ ಆರುಂಡಿ ಗ್ರಾಮದಲ್ಲಿ ಮಹಿಳೆಯ ಕೊಲೆ ಪ್ರಕರಣದ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಆರೋಪಿಗಳ ಪತ್ತೆಗೆ ಸೂಕ್ತ ತನಿಖಾ ‌ನಡೆಸುವಂತೆ ತನಿಖಾಧಿಕಾರಿಗಳಿಗೆ ಸೂಚನೆ ನೀಡಿದರು.

ದಾವಣಗೆರೆ; ಗುಂಪು ಘರ್ಷಣೆ ,‌ಪೊಲೀಸ್ ಮೇಲೆ ಹಲ್ಲೆ ಪ್ರಕರಣ; ಅಯೂಬ್ ಪೈಲ್ವಾನ್ ಮೂವರು ಪುತ್ರರು ಸಹಿತ ಇದುವರೆಗೆ 6 ಜನ ಅರೆಸ್ಟ್

ಆರುಂಡಿಯ ವೃದ್ದೆ  ಕಮಲಮ್ಮ ಒಂಟಿಯಾಗಿ ವಾಸವಾಗಿದ್ದರು. ರಾತ್ರಿ ವೃದ್ಧೆ ಮಲಗಿದ್ದ ಸಮಯದಲ್ಲಿ ಮನೆಗೆ ನುಗ್ಗಿದ ದುಷ್ಕರ್ಮಿಗಳು, ಅವರು ಕೂಗಾಡದಂತೆ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ. ಬಳಿಕ ವೃದ್ಧೆಯ ಮೈಮೇಲಿದ್ದ ಚಿನ್ನದ ಸರ ಸೇರಿದಂತೆ ಒಟ್ಟು 73 ಗ್ರಾಂ ತೂಕದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *