Connect with us

Dvgsuddi Kannada | online news portal | Kannada news online

ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ

ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ: ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ಪ್ರವರ್ಗ-3ಎ ನಲ್ಲಿ ಬರುವ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮದಾರಿ ಒಕ್ಕಲಿಗ, ಗಂಗಡ್‍ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ (Gouda)/ ಗೌಡ (Gowda) ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮಾ, ರೆಡ್ಡಿ, ಗೌಡರ್, ನಾಮದಾರಿಗೌಡ, ಉಪ್ಪಿನ ಕೊಳಗ/ಉತ್ತಮ ಕೊಳಗ ಒಕ್ಕಲಿಗ ಸಮುದಾಯದ ಜನರ ಆರ್ಥಿಕ ಅಭಿವೃದ್ಧಿಗಾಗಿ 2022-23 ನೇ ಸಾಲಿನಲ್ಲಿ ವಿವಿಧ ಯೋಜನೆಗಳಲ್ಲಿ ಸೌಲಭ್ಯ ಪಡೆಯ ಬಯಸುವವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಒಕ್ಕಲಿಗ ಸಮುದಾಯದವರು ಸ್ವಯಂ ಉದ್ಯೋಗಕ್ಕೆ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಸ್ವಯಂ ಉದ್ಯೋಗ ಸಾಲ ಯೋಜನೆ, ನಿರುದ್ಯೋಗಿ ಯುವಕರಿಗೆ ಟೂರಿಸ್ಟ್ ಟ್ಯಾಕ್ಸಿ/ಸರಕು ಸಾಗಾಣಿಕೆ ವಾಹನ ಕೊಳ್ಳಲು ಸಹಾಯಧನ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆ ಈ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಆ.30 ಕೊನೆಯ ದಿನಾಂಕ ವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ವೆಬ್‍ಸೈಟ್ https://kvcdc.karnataka.gov.in ನಲ್ಲಿ ಅಥವಾ ಕೇಂದ್ರ ಕಛೇರಿಯ ದೂರವಾಣಿ ಸಂಖ್ಯೆ: 080-29904268 ನ್ನು / ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ: 08192 230934 ನ್ನು ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ), ಕುರುಬರ ಹಾಸ್ಟೇಲ್ ಕಟ್ಟಡ, ಜಯದೇವ ಸರ್ಕಲ್ ಹತ್ತಿರ, ದಾವಣಗೆರೆ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top