Connect with us

Dvgsuddi Kannada | online news portal | Kannada news online

ಸಿಎಂ ಯಡಿಯೂರಪ್ಪ ವಚನ ಭ್ರಷ್ಟರಾಗದಿರಲಿ: ವಿಜಯಾನಂದ ಕಾಶಪ್ಪನವರ್

Home

ಸಿಎಂ ಯಡಿಯೂರಪ್ಪ ವಚನ ಭ್ರಷ್ಟರಾಗದಿರಲಿ: ವಿಜಯಾನಂದ ಕಾಶಪ್ಪನವರ್

ದಾವಣಗೆರೆ: ಸಿಎಂ ಯಡಿಯೂರಪ್ಪ ಕೊಟ್ಟ ಮಾತು ಉಳಿಸಿಕೊಳ್ಳುವ ಮುಖ್ಯಮಂತ್ರಿ ಎಂದು ಈಗಾಗಲೇ ದೇಶದಲ್ಲಿಯೇ ಖ್ಯಾತಿ ಗಳಿಸಿದ್ದಾರೆ. ಹೀಗಾಗಿ ಪಂಚಮಸಾಲಿ ಸಮಾಜವನ್ನು 2ಎಗೆ ಸೇರಿಸುವ ಮಾತು ಉಳಿಸಿಕೊಂಡು ವಚನ ಭ್ರಷ್ಟರಾಗದಿರಲಿ ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಹೇಳಿದರು.

ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಕೊಟ್ಟ ಮಾತು ಎಂದೂ ತಪ್ಪಿಲ್ಲ. ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ವೀಶಶೈವ ಲಿಂಗಾಯತ ಸಮಾಜವನ್ನು ಕೇಂದ್ರ ಒಬಿಸಿ ಪಟ್ಟಿಗೆ ಸೇರಿಸುವುದು ಮತ್ತು ಪಂಚಮಸಾಲಿ ಸಮಾಜವನ್ನು 2 ಎಗೆ ಸೇರಿಸಲು ನಿರ್ಧರಿಸಿದ್ದರು. ಆದರೆ, ಈ ಮಹತ್ವದ ನಿರ್ಧಾರಕ್ಕೆ ಬಿಜೆಪಿಯಲ್ಲಿ ಕೆಲ ನಾಯಕರು ಹೈಕಮಾಂಡ್ ಮೇಲೆ ಒತ್ತಡ ತಂದು ತಡೆ ನೀಡಿದ್ದಾರೆ ಎಂದರು.

ನಮ್ಮ ಸಮಾಜಕ್ಕೆ ಹತ್ತು ಪೀಠಗಳಾಗಲಿ ಅಭ್ಯಂತರ ಇಲ್ಲ.ಆದರೆ,  ನಾವು 2A ಮೀಸಲಾತಿ ಗೆ ಹೋರಾಟ ಮಾಡೋದು ಮಾತ್ರ ನಿಲ್ಲಿಸುವುದಿಲ್ಲ. ಈ  ಮಿಸಲಾತಿ  ಪಾದಯಾತ್ರೆ ಪಂಚಮಸಾಲಿ ಸಮಾಜ ಶಕ್ತಿ ಪ್ರದರ್ಶನದ ಸಂಕೇತವಾಗಲಿದೆ. ಕೊಡಲಸಂಗಮದಿಂದ ಬೆಂಗಳೂರು ವರೆಗಿನ  ಪಾದಯಾತ್ರೆಯಲ್ಲಿ 20 ಲಕ್ಷಕ್ಕೂ ಹೆಚ್ಚು ಜನರು ಸೇರುವ ಸಾಧ್ಯತೆ ಇದೆ ಎಂದು ತಿಳಿಸಿದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in Home

To Top
(adsbygoogle = window.adsbygoogle || []).push({});