ಡಿವಿಜಿ ಸುದ್ದಿ, ದಾವಣಗೆರೆ: ಪಂಚಮಸಾಲಿ ಸಮಾಜವನ್ನು ಪ್ರವರ್ಗ 2ಎಗೆ ಸೇರಿಸುವಂತೆ ಆಗ್ರಹಿಸಿ ಕೂಡಲ ಸಂಗಮದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಅ.28 ರಂದು ಅವರು ಬೆಳಗಾವಿಯ ಸುವರ್ಣ ಸೌಧದ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ತಿಂಗಳ 28 ರಂದು ಬೆಳಗಾವಿಯ ಸುವರ್ಣ ಸೌಧದ ಮುಂದೆ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು. ಅಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಉಪವಾಸ ಸತ್ಯಾಗ್ರಹ ನಡೆಯಲಿದೆ. ಈ ವೇಳೆ ಪಂಚಮಸಾಲಿ ಅಭಿವೃದ್ಧಿ ನಿಗಮ ಮಾಡಬೇಕು ಮನವಿ ಮಾಡಲಾಗುವುದು ಎಂದರು.
ಪಂಚಮಸಾಲಿ ಸಮಾಜವನ್ನು ಕೇಂದ್ರದಲ್ಲಿ ಒಬಿಸಿಗೆ ಸೇರಿಸಬೇಕು. ಶಿಕ್ಷಣ ಮತ್ತು ಉದ್ಯೋಗಕ್ಕೆ ಮೀಸಲಾತಿ ಅಗತ್ಯವಾಗಿದೆ. ನಮ್ಮ ಸಮಾಜದ ಮೂರು ಜನರಿಗೆ ಸಚಿವ ಸ್ಥಾನ ನೀಡಬೇಕಿತ್ತು. ಆದರೆ ಈ ಬಗ್ಗೆ ಮುಖ್ಯಮಂತ್ರಿಗಳು ದಿವ್ಯ ಮೌನ ವಹಿಸಿದ್ದಾರೆ. ಸರ್ಕಾರದಲ್ಲಿ 12 ಜನ ಶಾಸಕರು ಇದ್ದಾರೆ.ಸರ್ಕಾರಕ್ಕೆ ಸಚಿವ ಸ್ಥಾನ ನೀಡುವಂತೆ ಕೇಳಿಕೇಳಿ ಸಾಕಾಗಿದೆ. ಈಗ ನಾವು ಸಚಿವ ಸ್ಥಾನ ದ ಬಗ್ಗೆ ಮಾತನಾಡುವುದಕ್ಕೆ ಹೋಗುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.



