Connect with us

Dvgsuddi Kannada | online news portal | Kannada news online

ಪಂಚಮಸಾಲಿ ಸಮಾಜ 2ಎಗೆ ಸೇರಿಸುವಂತೆ ಆಗ್ರಹಿಸಿ ಅ.28 ರಂದು  ಉಪವಾಸ ಸತ್ಯಾಗ್ರಹ

ದಾವಣಗೆರೆ

ಪಂಚಮಸಾಲಿ ಸಮಾಜ 2ಎಗೆ ಸೇರಿಸುವಂತೆ ಆಗ್ರಹಿಸಿ ಅ.28 ರಂದು  ಉಪವಾಸ ಸತ್ಯಾಗ್ರಹ

ಡಿವಿಜಿ ಸುದ್ದಿ, ದಾವಣಗೆರೆ: ಪಂಚಮಸಾಲಿ ಸಮಾಜವನ್ನು ಪ್ರವರ್ಗ  2ಎಗೆ ಸೇರಿಸುವಂತೆ ಆಗ್ರಹಿಸಿ  ಕೂಡಲ ಸಂಗಮದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ  ಅ.28 ರಂದು ಅವರು   ಬೆಳಗಾವಿಯ ಸುವರ್ಣ ಸೌಧದ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ತಿಂಗಳ 28 ರಂದು ಬೆಳಗಾವಿಯ ಸುವರ್ಣ ಸೌಧದ ಮುಂದೆ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು. ಅಂದು ಬೆಳಗ್ಗೆ 9 ಗಂಟೆಯಿಂದ  ಸಂಜೆ 4 ಗಂಟೆವರೆಗೆ ಉಪವಾಸ ಸತ್ಯಾಗ್ರಹ ನಡೆಯಲಿದೆ. ಈ ವೇಳೆ ಪಂಚಮಸಾಲಿ ಅಭಿವೃದ್ಧಿ ನಿಗಮ ಮಾಡಬೇಕು ಮನವಿ ಮಾಡಲಾಗುವುದು ಎಂದರು.

ಪಂಚಮಸಾಲಿ ಸಮಾಜವನ್ನು ಕೇಂದ್ರದಲ್ಲಿ ಒಬಿಸಿಗೆ ಸೇರಿಸಬೇಕು. ಶಿಕ್ಷಣ ಮತ್ತು ಉದ್ಯೋಗಕ್ಕೆ ಮೀಸಲಾತಿ ಅಗತ್ಯವಾಗಿದೆ. ನಮ್ಮ ಸಮಾಜದ ಮೂರು ಜನರಿಗೆ ಸಚಿವ ಸ್ಥಾನ ನೀಡಬೇಕಿತ್ತು. ಆದರೆ ಈ ಬಗ್ಗೆ ಮುಖ್ಯಮಂತ್ರಿಗಳು ದಿವ್ಯ ಮೌನ ವಹಿಸಿದ್ದಾರೆ. ಸರ್ಕಾರದಲ್ಲಿ 12 ಜನ ಶಾಸಕರು ಇದ್ದಾರೆ.ಸರ್ಕಾರಕ್ಕೆ ಸಚಿವ ಸ್ಥಾನ ನೀಡುವಂತೆ ಕೇಳಿಕೇಳಿ ಸಾಕಾಗಿದೆ. ಈಗ ನಾವು ಸಚಿವ ಸ್ಥಾನ ದ ಬಗ್ಗೆ ಮಾತನಾಡುವುದಕ್ಕೆ ಹೋಗುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top