ಡಿವಿಜಿ ಸುದ್ದಿ, ದಾವಣಗೆರೆ: ಪಂಚಮಸಾಲಿ ಸಮಾಜವನ್ನು 2ಎಗೆ ಸೇರಿಸುವ ಮೀಸಲಾತಿ ಹೋರಾಟದಲ್ಲಿ ಕೂಡಲಸಂಗಮ ಪೀಠ ಹಾಗೂ ಹರರಿಹರ ವೀರಶೈವ ಪಂಚಮಸಾಲಿ ಪೀಠ ಒಂದಾಗಬೇಕು ಎಂಬುದಕ್ಕೆ ಬೆಂಬಲಿಸುತ್ತೇನೆ ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದ ಅಭಿವೃದ್ಧಿ ಹಾಗೂ ಅನ್ಯಾಯ ಸರಿಪಡಿಸುವ ಉದ್ದೇಶದಿಂದ ಪೀಠಗಳನ್ನು ಸ್ಥಾಪಿಸಲಾಗಿದೆ. ಪಂಚಮಸಾಲಿ ಸಮಾಜಕ್ಕೆ ಶಿಕ್ಷಣ ಹಾಗೂ ಉದ್ಯೋಗ ಮೀಸಲಾತಿಗಾಗಿ 2ಎ ಪ್ರವರ್ಗಕ್ಕೆ ಸೇರಿಸಬೇಕಿದೆ. ಹೀಗಾಗಿ ಎರಡು ಪೀಠಗಳು ಒಂದಾಗಬೇಕು ಎಂಬ ಆಲೋಚನೆಯನ್ನು ನಾನು ಸ್ವಾಗತಿಸುತ್ತೇನೆ. ಈ ಹೋರಾಟದಲ್ಲಿ ಭಾಗಿಯಾಗಲು ರಾಜ್ಯ ಸಮಿತಿ ಮೂಲಕ ಹರಿಹರ ಪೀಠಕ್ಕೆ ಆಹ್ವಾನ ನೀಡಲಾಗುವುದು ಎಂದರು.
ಸಮಾಜಕ್ಕೆ ಸಚಿವ ಸ್ಥಾನ ನೀಡುವುದಕ್ಕಿಂತಲೂ ಮೀಸಲಾತಿ ಬೇಕಿದೆ. ಶಾಸಕರ ಸಂಖ್ಯೆಗೆ ಅನುಗುಣವಾಗಿ ಮಂತ್ರಿ ಸ್ಥಾನ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿದರು.



