ಪಂಚಮಸಾಲಿ ಸಮಾಜ ಮೀಸಲಾತಿ ಹೋರಾಟ: ಹರಿಹರ,ಕೂಡಲ ಸಂಗಮ ಪೀಠಗಳು ಒಗ್ಗೂಡಿದರೆ ಸ್ವಾಗತ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: ಪಂಚಮಸಾಲಿ ಸಮಾಜವನ್ನು 2ಎಗೆ ಸೇರಿಸುವ ಮೀಸಲಾತಿ ಹೋರಾಟದಲ್ಲಿ ಕೂಡಲಸಂಗಮ ಪೀಠ ಹಾಗೂ ಹರರಿಹರ ವೀರಶೈವ ಪಂಚಮಸಾಲಿ ಪೀಠ ಒಂದಾಗಬೇಕು ಎಂಬುದಕ್ಕೆ ಬೆಂಬಲಿಸುತ್ತೇನೆ ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದ ಅಭಿವೃದ್ಧಿ ಹಾಗೂ ಅನ್ಯಾಯ ಸರಿಪಡಿಸುವ ಉದ್ದೇಶದಿಂದ ಪೀಠಗಳನ್ನು ಸ್ಥಾಪಿಸಲಾಗಿದೆ. ಪಂಚಮಸಾಲಿ ಸಮಾಜಕ್ಕೆ ಶಿಕ್ಷಣ ಹಾಗೂ ಉದ್ಯೋಗ ಮೀಸಲಾತಿಗಾಗಿ 2ಎ ಪ್ರವರ್ಗಕ್ಕೆ ಸೇರಿಸಬೇಕಿದೆ‌. ಹೀಗಾಗಿ ಎರಡು ಪೀಠಗಳು ಒಂದಾಗಬೇಕು ಎಂಬ ಆಲೋಚನೆಯನ್ನು ನಾನು ಸ್ವಾಗತಿಸುತ್ತೇನೆ. ಈ ಹೋರಾಟದಲ್ಲಿ ಭಾಗಿಯಾಗಲು ರಾಜ್ಯ ಸಮಿತಿ ಮೂಲಕ ಹರಿಹರ ಪೀಠಕ್ಕೆ ಆಹ್ವಾನ ನೀಡಲಾಗುವುದು ಎಂದರು.

ಸಮಾಜಕ್ಕೆ ಸಚಿವ ಸ್ಥಾನ ನೀಡುವುದಕ್ಕಿಂತಲೂ ಮೀಸಲಾತಿ ಬೇಕಿದೆ. ಶಾಸಕರ ಸಂಖ್ಯೆಗೆ ಅನುಗುಣವಾಗಿ ಮಂತ್ರಿ ಸ್ಥಾನ ನೀಡಿಲ್ಲ‌ ಎಂದು ಬೇಸರ ವ್ಯಕ್ತಪಡಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *