ದಾವಣಗೆರೆ: ನಗರ ಪ್ರದೇಶಗಳಲ್ಲಿ ಪ್ರಸಕ್ತ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ (pm awas yojana) ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಯೋಜಬೆ ಮಂಜೂರಾತಿಗೆ ಅಧಿಕಾರಿ, ಸಿಬ್ಬಂದಿ ಮತ್ತು ಮಧ್ಯವರ್ತಿಗಳಿಗೆ ಹಣ ನೀಡದಂತೆ ಮಹಾನಗರ ಪಾಲಿಕೆ ಆಯುಕ್ತೆ ಸೂಚನೆ ನೀಡಿದ್ದಾರೆ.
ಯಾರೆಲ್ಲಾ ಯೋಜನೆಗೆ ಅರ್ಜಿ ಸಲ್ಲಿಸಬಹುವುದು.?
- ಒಂಟಿ ಮಹಿಳೆಯರು
- ಅಂಗವಿಕಲರು
- ಹಿರಿಯ ನಾಗರಿಕರು
ತೃತೀಯ ಲಿಂಗಿಗಳು - ಎಸ್.ಸಿ., ಎಸ್.ಟಿ
- ಹಿಂದುಳಿದ
- ಅಲ್ಪಸಂಖ್ಯಾತ ವರ್ಗದವರು
- ಸ್ವಚ್ಛತಾ ಕಾರ್ಮಿಕರು
- ಪಿಎಂ.ಅವಾಸ್ ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು
- ಮ ಪ್ರಧಾನ್ ಮಂತ್ರಿ ವಿಶ್ವಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು
- ಅಂಗನವಾಡಿ ಕಾರ್ಯಕರ್ತರು
- ಕಟ್ಟಡ ಮತ್ತು ಇತರೆ : ನಿರ್ಮಾಣ ಕಾರ್ಮಿಕರು
- ವಲಸೆ ಬಂದ ಕುಟುಂಬದವರು
ಎಲ್ಲಿ ಅರ್ಜಿ ಸಲ್ಲಿಸಬೇಕು..?
ಅರ್ಜಿಗಳನ್ನು ವೆಬ್ಸೈಟ್ http://pmayurban.gov.in ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿಗಳ ಸರ್ವೆ ಕಾರ್ಯವನ್ನು ಮಹಾನಗರ ಪಾಲಿಕೆಯ ಕಂದಾಯ ಶಾಖೆಯ ಅಧಿಕಾರಿ, ಸಿಬ್ಬಂದಿಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದು, ಸರ್ವೆ ಕಾರ್ಯವು ಸಂಪೂರ್ಣ ಪಾರದರ್ಶಕವಾಗಿ ನಡೆಯುತ್ತಿದೆ.
ಹಣಕ್ಕೆ ಬೇಡಿಕೆ ಇಟ್ಟರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ
ಪಾಲಿಕೆಯ ಅಧಿಕಾರಿ, ಸಿಬ್ಬಂದಿ ಹಾಗೂ ಯಾವುದೇ ಮಧ್ಯವರ್ತಿಗಳು ಹಣ ನೀಡುವಂತೆ ಬೇಡಿಕೆ ಇಟ್ಟರೆ, ಅಂತಹವರ ವಿರುದ್ದ ತಕ್ಷಣ ಮಹಾನಗರ ಪಾಲಿಕೆ ಕಚೇರಿ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಸಲಹೆ ನೀಡಿ ಫಲಾನುಭವಿಗಳು ಅಧಿಕಾರಿ, ಸಿಬ್ಬಂದಿ, ಮಧ್ಯವರ್ತಿಗಳಿಗೆ ಹಣ ನೀಡಿ ಮೋಸ ಹೋದಲ್ಲಿ ಅದಕ್ಕೆ ಪಾಲಿಕೆ ಜವಾಬ್ದಾರಿಯಾಗುವುದಿಲ್ಲ ಎಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.



