Connect with us

Dvgsuddi Kannada | online news portal | Kannada news online

ಜನರ ಕೈಗೆ ಸಿಗದ 15 ಸಚಿವರ ವಿರುದ್ಧ ಮುಖ್ಯಮಂತ್ರಿ ಕ್ರಮವೇನು? -ಕೆ.ಎಲ್.ಹರೀಶ್ ಬಸಾಪುರ

ಪ್ರಮುಖ ಸುದ್ದಿ

ಜನರ ಕೈಗೆ ಸಿಗದ 15 ಸಚಿವರ ವಿರುದ್ಧ ಮುಖ್ಯಮಂತ್ರಿ ಕ್ರಮವೇನು? -ಕೆ.ಎಲ್.ಹರೀಶ್ ಬಸಾಪುರ

ದಾವಣಗೆರೆ: ರಾಜ್ಯದ 15 ಸಚಿವರು ಜನರ ಕೈಗೆ ಸಿಗುತ್ತಿಲ್ಲ. ಅವರು ದುರಹಂಕಾರಿಗಳು ಅವರ ಪಟ್ಟಿಯನ್ನು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಗೆ ನೀಡಿದ್ದೇನೆಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಬಹಿರಂಗವಾಗಿ ಹೇಳಿಕೆ ನೀಡಿದ್ದು, ಈ ಬಗ್ಗೆ ಪಕ್ಷ ಹಾಗೂ ಮುಖ್ಯಮಂತ್ರಿಗಳು ಏನು ಉತ್ತರ ನೀಡುತ್ತಾರೆ ಎಂದು ಕಾಂಗ್ರೆಸ್ ಜಿಲ್ಲಾ ಸಾಮಾಜಿಕ ಜಾಲತಾಣದ ಅಧ್ಯಕ್ಷ ಕೆ.ಎಲ್.ಹರೀಶ್ ಬಸಾಪುರ ಪ್ರಶ್ನಿಸಿದ್ದಾರೆ.

ಸರ್ಕಾರದ ಮಹತ್ವದ ಸ್ಥಾನದಲ್ಲಿ ಒಂದಾದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಈ ರೀತಿಯ ಹೇಳಿಕೆ ನೀಡಿರುವುದರಿಂದ ಮುಖ್ಯಮಂತ್ರಿಗಳು ಆ 15 ಸಚಿವರನ್ನು ಆಪಾದನೆ ಮಾಡಿರುವವರೇ ಹೇಳಿರುವಂತೆ ವಜಾ ಮಾಡಬೇಕು ಅಥವಾ ಈ ಆಪಾದನೆ ಸುಳ್ಳಾದರೆ ಸುಳ್ಳು ಆಪಾದನೆ ಮಾಡಿದಂತಹ ತಮ್ಮ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರನ್ನು ಅವರ ಸ್ಥಾನದಿಂದ ವಜಾ ಮಾಡಬೇಕು ಎಂದು ವಿನಂತಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top