ದಾವಣಗೆರೆ: ಪ್ರಿಯಕರನ ಜತೆ ಸೇರಿ ಪತಿಯನ್ನೇ ಕೊಲೆ ಮಾಡಿಸಿದ ಪತ್ನಿ..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಅಗ್ನಿ ಸಾಕ್ಷಿಯಾಗಿ ಮದುವೆಯಾದ ಪತಿಯನ್ನೇ ಪತ್ನಿ ಕೊಲೆ ಮಾಡಿಸಿದ್ದು, ಬೆಣ್ಣೆನಗರಿ ಜನರು ಬಿಚ್ಚಿಬೀಳಿಸುವಂತಿದೆ. ಪ್ರಿಯಕರನ ಜತೆಗಿನ ಸಂಬಂಧಕ್ಕೆ ಅಡ್ಡವಾಗಿದ್ದ ತನ್ನ ಗಂಡನನ್ನೇ ಕೊಲೆ ಮಾಡಿಸಿದ ಪತ್ನಿ ಈಗ ಪೊಲೀಸ್ ಅತಿಥಿಯಾಗಿದ್ದಾಳೆ

ಫೆಬ್ರುವರಿ 28 ರಂದು ದಾವಣಗೆರೆ ನಗರದ ಕಬ್ಬೂರು ಬಸಪ್ಪ ನಗರದಲ್ಲಿ ಪ್ರಶಾಂತ ಎಂಬ ವ್ಯಕ್ತಿಯನ್ನ ಕೊಲೆಯಾಗಿತ್ತು. ಈ ಪ್ರಕರಣದ ಬಗ್ಗೆ ತನಿಖೆ ನಡೆಸಿದ ಆರ್​ಎಂಸಿ ಠಾಣೆ ಪೊಲೀಸರು, ಇದೀಗ ಕೊಲೆ ರಹಸ್ಯ ಭೇದಿಸಿದ್ದಾರೆ. ಕೊಲೆ ಮಾಡಿಸಿದ್ದು ಬೇರೆ ಯಾರು ಅಲ್ಲ ಸ್ವತಃ ಅಗ್ನಿ ಸಾಕ್ಷಿಯಾಗಿ ಮದುವೆಯಾದ ಪತ್ನಿ ಎಂಬ ಸತ್ಯ ಬಯಲಾಗಿದೆ.

ಪತ್ನಿ ರೇಣುಕಾ ಇನ್ನೊಬ್ಬನೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಇದು ಪತಿಗೆ ಗೊತ್ತಾಗಿತ್ತು. ಈ ವಿಷಯಕ್ಕೆ ಮನೆಯಲ್ಲಿ ಜಗಳ ನಡೆಯುತ್ತಿತ್ತು. ಪ್ರಶಾಂತ್​ ಫೆಬ್ರುವರಿ 28 ರಂದು ಆತನ ಸ್ನೇಹಿತ ರಾಕೇಶ್ ಎಂಬಾತ ಬಂದು, ಒಂದು ಕಡೆ ಕೋಳಿ ಚೆನ್ನಾಗಿವೆ ಎಂದು ಹೇಳಿ ಕರೆದುಕೊಂಡು ಹೋಗಿ ಕೊಲೆ ಮಾಡಿದ್ದ.

ಪತ್ನಿ ರೇಣುಕಾ ದಾವಣಗೆರೆ ತಾಲೂಕಿನ ಹದಡಿ ನಿವಾಸಿ. ಜೊತೆಗೆ ಮೂರು ವರ್ಷದ ಗಂಡು ಮಗ ಕೂಡ ಇದ್ದಾನೆ. ಮದುವೆಯಾಗಿ ನಾಲ್ಕು ವರ್ಷವಾಗಿದೆ. ಪ್ರಶಾಂತ್​ನದ್ದು ಟೈಲ್ಸ್ ಕೆಲ್ಸ. ಕೈ ತುಂಬ ದುಡ್ಡು, ಆದ್ರೆ ಮನೆಯಲ್ಲಿ ನೆಮ್ಮದಿ ಇರಲಿಲ್ಲ. ಕೊಲೆಯಾದ ದಿನ ತನಗೆ ಎನು ಗೊತ್ತಿಲ್ಲ ಎಂದು ನಾಟಕವಾಡಿದ್ದಳು. ಕೊಲೆಯಾ ಒಂಬತ್ತು ದಿನಗಳ ಬಳಿಕ ಪೊಲೀಸ್ ವಿಚಾರಣೆಯಲ್ಲಿ ಸತ್ಯ ಗೊತ್ತಾಗಿದೆ.ಪೊಲೀಸರು ಪ್ರಶಾಂತ್​ ಪತ್ನಿ ರೇಣುಕಾ ಹಾಗೂ ಅವಳ ಪ್ರೀಯಕರ ರಾಕೇಶ್​ನನ್ನ ಬಂಧಿಸಿ ಜೈಲಿಗೆ ಅಟ್ಟಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *