ದಾವಣಗೆರೆ ಜಿಲ್ಲಾ ಪೊಲೀಸರ ಭರ್ಜರಿ ಕಾರ್ಯಾಚರಣೆ; ನಕಲಿ ಬಂಗಾರ ನೀಡಿ ವಂಚನೆ;ಓರ್ವ ಆರೋಪಿತನ ಬಂಧನ-22 ಲಕ್ಷ ವಶ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕೇರಳ ಮೂಲದ ವ್ಯಕ್ತಿಗೆ ದಾವಣಗೆರೆ ನಗರದ ಪಿ.ಬಿ ರಸ್ತೆಯ ಟೊಯೋಟಾ ಶೋರೂಂ ಬಳಿ ನಕಲಿ ಬಂಗಾರ ನೀಡಿ 30 ಲಕ್ಷ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಜಿಲ್ಲಾ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ 22 ಲಕ್ಷ ವಶಕ್ಕೆ ಪಡೆಯಲಾಗಿದೆ.

ಗಾಂಧೀನಗರ ಪೊಲೀಸ್ ಠಾಣೆಯಲ್ಲಿ ಇದೇ ವರ್ಷದ ಮಾರ್ಚ್ ತಿಂಗಳಲ್ಲಿ ಪ್ರಕರಣ ದಾಖಲಾಗಿರುತ್ತದೆ. ಪ್ರಕರಣ ದಾಖಲಾಗಿ 6-7 ತಿಂಗಳುಗಳು ಕಳೆದರೂ ಆರೋಪಿತರು ಪತ್ತೆಯಾಗದ ಕಾರಣ ಮಾನ್ಯ ಪೊಲೀಸ್ ಅಧೀಕ್ಷಕರು, ಆರೋಪಿ ಪತ್ತೆ ಮಾಡಿ ಹಣ ಅಮಾನತ್ತು ಮಾಡಲು ಡಿಸಿಆರ್‌ಬಿ ಘಟಕದ ಪೊಲೀಸ್ ಉಪಾಧೀಕ್ಷಕ ಬಿ.ಎಸ್.ಬಸವರಾಜ್ ಅವರಿಗೆ ಪ್ರಕರಣದ ಕಡತವನ್ನು ವರ್ಗಾಯಿಸಿದ್ದರ ಮೇರೆಗೆ ಕಾರ್ಯಪ್ರವೃತ್ತರಾದ ಡಿಸಿಆರ್‌ಬಿ ತಂಡದವರು ಬೆಂಗಳೂರು, ತಮಿಳುನಾಡು, ಆಂದ್ರಪ್ರದೇಶ ರಾಜ್ಯಗಳಲ್ಲಿ ತಿರುಗಾಡಿ ಆರೋಪಿತರ ಬಗ್ಗೆ ಮಾಹಿತಿ ಕಲೆಹಾಕಿರುತ್ತಾರೆ. ಈ ಪ್ರಕರಣದ ಒಬ್ಬ ಆರೋಪಿತ ಗಿರೀಶ್ ತಂದೆ ರಂಗಪ್ಪ ಎಂಬುವನು ದಾವಣಗೆರೆಗೆ ಬರುವ ಬಗ್ಗೆ ಖಚಿತ ಮಾಹಿತಿಯನ್ನಾಧರಿಸಿ ಆರೋಪಿತತನನ್ನು ದಸ್ತಗಿರಿ ಮಾಡಿದ್ದು, ಆರೋಪಿತನಿಂದ ಮೇಲ್ಕಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 22 ಲಕ್ಷ ನಗದು ಹಣವನ್ನು ಅಮಾನತ್ತುಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.ಪ್ರಕರಣದಲ್ಲಿನ ಉಳಿದ ಆರೋಪಿತರು ಬೇರೆ ಬೇರೆ ರಾಜ್ಯದವರಾಗಿದ್ದು, ತನಿಖೆ ಮುಂದುವರೆದಿರುತ್ತದೆ.

ಈ‌ ಪ್ರಕರಣದಲ್ಲಿನ ಆರೋಪಿತ ಪತ್ತೆ ಹಾಗೂ ಹಣವನ್ನು ವಶಪಡಿಸಿಕೊಳ್ಳುವಲ್ಲಿ ಬಿ.ಎಸ್.ಬಸವರಾಜ್ ಪೊಲೀಸ್ ಉಪಾಧೀಕ್ಷಕರು, ಡಿಸಿಆರ್‌ಬಿ ಘಟಕ ಮತ್ತು ಸಿಬ್ಬಂದಿಗಳಾದ ಕೆ.ಸಿ ಮಜೀದ್, ಕೆ.ಟಿ. ಆಂಜನೇಯ, ಡಿ.ರಾಘವೇಂದ್ರ, ಯು.ಮಾರುತಿ, ಪಿ.ಸುರೇಶ್, ಜೆ.ಹೆಚ್.ಆರ್.ನಟರಾಜ್, ಈ.ಬಿ.ಅಶೋಕ, ಆರ್.ರಮೇಶ್‌ನಾಯ್ಕ್, ಸಿ.ಎಸ್.ಬಾಲರಾಜ್, ಸಿ.ಮಲ್ಲಿಕಾರ್ಜುನ್ ಹಾಗೂ ಕೆ.ರಂಗಪ್ಪ ಎಆರ್‌ಎಸ್‌ಐ ಇವರುಗಳು ಭಾಗವಹಿಸಿರುತ್ತಾರೆ. ಈ ಕಾರ್ಯವನ್ನು ಪೊಲೀಸ್ ಅಧೀಕ್ಷಕ ಸಿ.ಬಿ.ರಿಷ್ಯಂತ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್.ಬಿ.ಬಸರಗಿ ಶ್ಲಾಘಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *