Connect with us

Dvgsuddi Kannada | online news portal | Kannada news online

ದಾವಣಗೆರೆ: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 2.55 ಲಕ್ಷ ಬೆಲೆಯ 170 ಕ್ವಿಂಟಾಲ್ ಪಡಿತರ ಅಕ್ಕಿ ವಶ

IMG 20221129 WA0040

ದಾವಣಗೆರೆ

ದಾವಣಗೆರೆ: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 2.55 ಲಕ್ಷ ಬೆಲೆಯ 170 ಕ್ವಿಂಟಾಲ್ ಪಡಿತರ ಅಕ್ಕಿ ವಶ

ದಾವಣಗೆರೆ: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 2.55 ಲಕ್ಷ ಬೆಲೆಯ 170 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ವಿದ್ಯಾನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಜಿ.ಪಂ ಕಚೇರಿ ಸಮೀಪ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಬೆಂಗಳೂರು ಕಡೆ ಸಾಗಾಟ ಮಾಡುತ್ತಿದ್ದಾಗ ವಿದ್ಯಾನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಟ್ಟು 10 ಲಕ್ಷ ಬೆಲೆಯ ಅಶೋಕ್ ಲೈಲ್ಯಾಂಡ್ ಲಾರಿ, 2.555,300 ರೂಪಾಯಿ ಮೌಲ್ಯದ 170 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ರಾಣೆಬೇನ್ನೂರು ಮೂಲದ ಚಾಲಕ ಖಾದರ್ ಸಾಬ್ (24 ) ವಶಕ್ಕೆ ಪಡೆಯಲಾಗಿದ್ದು, ಅಕ್ಕಿ ಮತ್ತು ಲಾರಿ ಮಾಲೀಕನ ವಿರುದ್ಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಿವೈಎಸ್ ಪಿ ನರಸಿಂಹ ತಾಮ್ರಧ್ವಜ ಮಾರ್ಗದರ್ಶನದಲ್ಲಿ ಕೆಟಿಜೆ‌ನಗರ ವೃತ್ತ ನಿರೀಕ್ಷಕ ಶಶಿಧರ ನೇತೃತ್ವದಲ್ಲಿ ವಿದ್ಯಾನಗರ ಪೊಲೀಸ್ ಠಾಣೆಯ ಪಿಎಸ್ ಐಗಳಾದ ರೇಣುಕಾ, ಜಯಪ್ಪನಾಯ್ಕ್ ಹಾಗೂ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಜಿಲ್ಲಾ ಪೊಲೀಸರ ಕಾರ್ಯಾಚರಣೆಗೆ ಎಸ್ ಪಿ ರಿಷ್ಯಂತ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top